ನಗರಸಭೆ ಸದಸ್ಯರ ತಳ್ಳಾಟ: ವಿಡಿಯೋ ವೈರಲ್‌

ಲಕ್ನೋ: ನಾವು ಸಾಮಾನ್ಯವಾಗಿ ವಿಧಾನಸಭೆ ಕಲಾಪಗಳಲ್ಲಿ ಅಶಿಸ್ತಿನ ವರ್ತನೆ ವಿಡಿಯೋಗಳನ್ನು ನೋಡುತ್ತಿರುತ್ತೇವೆ. ಆದರೆ ಉತ್ತರಪ್ರದೇಶದಲ್ಲಿ ನಗರಸಭೆಯ ಸದಸ್ಯರುಗಳ ನಡುವೆ ಭಾರೀ ಗುದ್ದಾಟ-ತಳ್ಳಾಟ ನಡೆದಿದೆ. ಸದ್ಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಶಾಮ್ಲಿ ಪುರಸಭೆಯ ಆಡಳಿತ ಮಂಡಳಿ ಸಭೆಯಲ್ಲಿ ಪುರಸಭೆ ಅಧ್ಯಕ್ಷ ಅರವಿಂದ ಸಂಗಲ್ ಮತ್ತು ಶಾಸಕ ಪ್ರಸನ್ನ ಚೌಧರಿ ಉಪಸ್ಥಿತರಿದ್ದರು. ಸಭೆಯಲ್ಲಿ 4 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ಆರಂಭವಾಯಿತು. ಈ ವೇಳೆ ಅರವಿಂದ ಸಂಗಲ್ ಮತ್ತು ಪ್ರಸನ್ನ ಚೌಧರಿ ನಡುವೆ ತೀವ್ರ ವಾಗ್ವಾದ ನಡೆಯಿತು. ಮಾತಿನ ಚಕಮಕಿಯಿಂದ ಪ್ರಾರಂಭವಾದ ಜಗಳ ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ತಿರುಗಿತು.

ಇಬ್ಬರು ಸದಸ್ಯರು ಪರಸ್ಪರ ಗುದ್ದಾಟ ನಡೆಸುವುದರೊಂದಿಗೆ ನಗರ ಪಾಲಿಕೆ ಆಡಳಿತ ಮಂಡಳಿ ಸಭೆಯು ಸಂಪೂರ್ಣ ಕುಸ್ತಿ ಅಖಾಡವಾಯಿತು. ಪೊಲೀಸರು ಮತ್ತು ಹಿರಿಯ ಮುಖಂಡರ ಎದುರೇ ಇಡೀ ಘಟನೆ ನಡೆದಿದೆ. ಇನ್ನು ಇದರ ವೀಡಿಯೋವನ್ನು ಸಭೆಯಲ್ಲಿದ್ದವರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಸದ್ಯ ಈ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.‌

ಇತ್ತ ವೈರಲ್‌ ವೀಡಿಯೋವನ್ನು ಗಮನಿಸಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಬಿಜೆಪಿಯನ್ನು (BJP) ತೀವ್ರ ತರಾಟೆಗೆ ತೆಗೆದುಕೊಂಡರು.

ಈ ಸಂಬಂಧ ತಮ್ಮ ಎಕ್ಸ್‌ ಖಾತೆಯಲ್ಲಿ ವೀಡಿಯೋ ಹಂಚಿಕೊಂಡು, ಯಾವುದೇ ಅಭಿವೃದ್ಧಿ ಕೆಲಸಗಳು ಆಗದಿದ್ದಾಗ ಪರಿಶೀಲನಾ ಸಭೆಯಲ್ಲಿ ಇನ್ನೇನು ಆಗಿರಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಇದರಿಂದಾಗಿ ಶಾಮ್ಲಿಯಲ್ಲಿ ನಡೆದ ಕೌನ್ಸಿಲರ್‌ಗಳ ಸಭೆಯಲ್ಲಿ ಪರಸ್ಪರ ದೈಹಿಕ ಹಲ್ಲೆಗಳು ನಡೆದಿವೆ ಎಂದಿದ್ದಾರೆ. ಒಟ್ಟಿನಲ್ಲಿ ನಿಮ್ಮ ಸ್ವಂತ ಭದ್ರತೆಯನ್ನು ಏರ್ಪಡಿಸಿದ ನಂತರ ಪರಿಶೀಲನಾ ಸಭೆಗೆ ಬನ್ನಿ ಎಂಬುದು ಬಿಜೆಪಿ ಆಡಳಿತದ ಪಾಠವಾಗಿದೆ ಎಂದು ಅವರು ಗರಂ ಆದರು.

Gayathri SG

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

6 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

30 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago