ಆಯೋಧ್ಯೆ: ಅಯೋಧ್ಯೆ ರಾಮ ಮಂದಿರ ಆಂದೋಲನವನ್ನು 90ರ ದಶಕದಲ್ಲಿ ಆರಂಭಿಸಿದ ಬಿಜೆಪಿಯ ಹಿರಿಯರಾದ ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ವಯಸ್ಸಿನ ಕಾರಣದಿಂದ ರಾಮ ಮಂದಿರ ಪ್ರಾಣಪ್ರತಿಷ್ಠಿಗೆ ಬರಬೇಡಿ ಎಂದು ರಾಮ ಮಂದಿರ ಟ್ರಸ್ಟ್ ಮನವಿ ಮಾಡಿದ ಘಟನೆ ಭಾರಿ ವಿರೋಧಕ್ಕೆ ಕಾರಣಾಗಿತ್ತು. ಸಾಮಾಜಿಕ ಮಾಧ್ಯಮ ಸೇರಿದಂತೆ ಎಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ವಿಶ್ವ ಹಿಂದೂ ಪರಿಷತ್ ಹಿರಿಯ ನಾಯಕರ ಅಭಿಪ್ರಾಯ ಹಂಚಿಕೊಂಡು ಸ್ಪಷ್ಟನೆ ನೀಡಿದೆ.
ರಾಮ ಮಂದಿರ ಆಂದೋಲದನ ಪ್ರಮುಖರಾಗಿರುವ ಎಲ್ ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ಅವರಿಗೆ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಆಹ್ವಾನ ನೀಡಲಾಗಿದೆ. ಇಬ್ಬರನ್ನು ಭೇಟಿಯಾಗಿ ಆಹ್ವಾನಿಸಲಾಗಿದೆ. ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠೆ ಹಾಗೂ ಉದ್ಘಾಟನೆಗೆ ಆಹ್ವಾನ ನೀಡಲಾಗಿದೆ. ಈ ವೇಳೆ ಇಬ್ಬರು ಐತಿಹಾಸಿಕ ಕ್ಷಣದಲ್ಲಿ ಪಾಲ್ಗೊಳ್ಳಲು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಹೇಳಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಸ್ಪಷ್ಟನೆ ನೀಡಿದೆ.
ಎಲ್ಕೆ ಅಡ್ವಾಣಿಗೆ 96 ವರ್ಷ ವಯಸ್ಸಾಗಿದ್ದರೆ, ಮುರಳಿ ಮನೋಹರ್ ಜೋಶಿಗೆ 90 ವರ್ಷ ವಯಸ್ಸಾಗಿದೆ. ಈ ಕಾರಣದಿಂದ ರಾಮ ಮಂದಿರ ಟ್ರಸ್ಟ್ ಸದಸ್ಯರು, ಕುಟುಂಬಸ್ಥರ ಜೊತೆ ಮಾತುಕತೆ ನಡೆಸಿದ್ದರು. ವಯಸ್ಸಿನ ಕಾರಣದಿಂದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸುವುದು ಕಷ್ಟವಾಗಲಿದೆ. ಆದರೆ ಅಂತಿಮ ನಿರ್ಧಾರವನ್ನು ಕುಟುಂಬಸ್ಥರು ಚರ್ಚಿಸಿ ತೆಗೆದುಕೊಳ್ಳಿ ಎಂದು ಟ್ರಸ್ಟ್ ಮನವಿ ಮಾಡಿತ್ತು.
“राम मंदिर आंदोलन के पुरोधा आदरणीय लाल कृष्ण आडवाणी जी और आदरणीय डॉ मुरली मनोहर जोशी जी को अयोध्या में 22 जनवरी 2024 को राम मंदिर के प्राण प्रतिष्ठा कार्यक्रम में आने का निमंत्रण दिया। रामजी के आंदोलन के बारे में बात हुई। दोनों वरिष्ठों ने कहा कि वह आने का पूरा प्रयास करेंगे”:… pic.twitter.com/gF0QEdC80d
— Vishva Hindu Parishad -VHP (@VHPDigital) December 19, 2023