News Karnataka Kannada
Tuesday, May 07 2024
ಉತ್ತರ ಪ್ರದೇಶ

ನಾವು ರಾಮಲಲ್ಲಾಗಾಗಿ ಕಾಯುತ್ತಿದ್ದೇವೆ ಎಂದ ಉಮಾಭಾರತಿ

ಅಯೋಧ್ಯೆಯ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿ ನಾಯಕಿ ಉಮಾಭಾರತಿ ಇಂದು ಅಯೋಧ್ಯೆಯಲ್ಲಿದ್ದಾರೆ
Photo Credit : News Kannada

ಅಯೋಧ್ಯೆ: ಅಯೋಧ್ಯೆಯ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿ ನಾಯಕಿ ಉಮಾಭಾರತಿ ಇಂದು ಅಯೋಧ್ಯೆಯಲ್ಲಿದ್ದಾರೆ.

ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ದ ಕಾರ್ಯ ನಡೆಸುವ ಕೊನೆಯ ಕ್ಷಣದ ಸಿದ್ಧತೆಗಳ ನಡುವೆ, ಉಮಾಭಾರತಿ ಅವರು ದೇವಾಲಯದ ಆಂದೋಲನದ ಇನ್ನೊಬ್ಬ ಪ್ರಮುಖ ನಾಯಕಿ ಸಾಧ್ವಿ ಋತಂಭರಾ ಅವರನ್ನು ಅಪ್ಪಿಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರ ಕಣ್ಣಲ್ಲೂ ಆನಂದ ಭಾಷ್ಪ. ಅವರ ರಾಜಕೀಯ ಹೋರಾಟ ಫಲಕೊಟ್ಟಿದ್ದು, ಈ ಖುಷಿ ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು.

ನಾನು ಅಯೋಧ್ಯೆಯ ರಾಮ ಮಂದಿರದ ಮುಂದೆ ಇದ್ದೇನೆ, ನಾವು ರಾಮ ಲಲ್ಲಾಗಾಗಿ ಕಾಯುತ್ತಿದ್ದೇವೆ ಎಂದು ಉಮಾಭಾರತಿ ಫೋಟೊವೊಂದನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

1990 ರ ದಶಕದ ರಾಮಮಂದಿರ ಚಳವಳಿಯ ಕೆಲವು ನಾಯಕರಲ್ಲಿ ಉಮಾ ಭಾರತಿ ಅವರು ಇಂದು ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐನಿಂದ ಆರೋಪ ಹೊರಿಸಲಾದ ಬಿಜೆಪಿ ಮತ್ತು ಸಂಘಪರಿವಾರದ ನಾಯಕರಲ್ಲಿ ಉಮಾ ಭಾರತಿ ಮತ್ತು ಋತಂಭರಾ ಸೇರಿದ್ದಾರೆ. ಅಡ್ವಾಣಿ, ಜೋಶಿ ಮತ್ತು ಇತರರೊಂದಿಗೆ ವಿಶೇಷ ನ್ಯಾಯಾಲಯವು ಇವರನ್ನು 2020 ರಲ್ಲಿ ಖುಲಾಸೆಗೊಳಿಸಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು