ಅಯೋಧ್ಯೆ: ಅಯೋಧ್ಯೆಯ ಆಂದೋಲನದ ಮುಂಚೂಣಿಯಲ್ಲಿದ್ದ ಬಿಜೆಪಿ ನಾಯಕಿ ಉಮಾಭಾರತಿ ಇಂದು ಅಯೋಧ್ಯೆಯಲ್ಲಿದ್ದಾರೆ.
ರಾಮಲಲ್ಲಾ ‘ಪ್ರಾಣ ಪ್ರತಿಷ್ಠಾ’ದ ಕಾರ್ಯ ನಡೆಸುವ ಕೊನೆಯ ಕ್ಷಣದ ಸಿದ್ಧತೆಗಳ ನಡುವೆ, ಉಮಾಭಾರತಿ ಅವರು ದೇವಾಲಯದ ಆಂದೋಲನದ ಇನ್ನೊಬ್ಬ ಪ್ರಮುಖ ನಾಯಕಿ ಸಾಧ್ವಿ ಋತಂಭರಾ ಅವರನ್ನು ಅಪ್ಪಿಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಬ್ಬರ ಕಣ್ಣಲ್ಲೂ ಆನಂದ ಭಾಷ್ಪ. ಅವರ ರಾಜಕೀಯ ಹೋರಾಟ ಫಲಕೊಟ್ಟಿದ್ದು, ಈ ಖುಷಿ ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು.
ನಾನು ಅಯೋಧ್ಯೆಯ ರಾಮ ಮಂದಿರದ ಮುಂದೆ ಇದ್ದೇನೆ, ನಾವು ರಾಮ ಲಲ್ಲಾಗಾಗಿ ಕಾಯುತ್ತಿದ್ದೇವೆ ಎಂದು ಉಮಾಭಾರತಿ ಫೋಟೊವೊಂದನ್ನು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
1990 ರ ದಶಕದ ರಾಮಮಂದಿರ ಚಳವಳಿಯ ಕೆಲವು ನಾಯಕರಲ್ಲಿ ಉಮಾ ಭಾರತಿ ಅವರು ಇಂದು ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐನಿಂದ ಆರೋಪ ಹೊರಿಸಲಾದ ಬಿಜೆಪಿ ಮತ್ತು ಸಂಘಪರಿವಾರದ ನಾಯಕರಲ್ಲಿ ಉಮಾ ಭಾರತಿ ಮತ್ತು ಋತಂಭರಾ ಸೇರಿದ್ದಾರೆ. ಅಡ್ವಾಣಿ, ಜೋಶಿ ಮತ್ತು ಇತರರೊಂದಿಗೆ ವಿಶೇಷ ನ್ಯಾಯಾಲಯವು ಇವರನ್ನು 2020 ರಲ್ಲಿ ಖುಲಾಸೆಗೊಳಿಸಿತು.
मैं अयोध्या में राम मंदिर के सामने हूं, रामलला की प्रतीक्षा हो रही है।@BJP4India @BJP4MP @ShriAyodhya_ @RamNagariAyodhy pic.twitter.com/2NDjQZhQxH
— Uma Bharti (@umasribharti) January 22, 2024