News Karnataka Kannada
Thursday, May 09 2024
ಉತ್ತರ ಪ್ರದೇಶ

ರಸ್ತೆ ಅಪಘಾತದಲ್ಲಿ ಪತ್ನಿ ಸಾವು: ನೋವಿನಿಂದ ಪತಿಯೂ ಆತ್ಮಹತ್ಯೆ

ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ ನಡೆದಿದೆ.
Photo Credit : NewsKarnataka

ಉತ್ತರ ಪ್ರದೇಶ: ರಸ್ತೆ ಅಪಘಾತದಲ್ಲಿ ಪತ್ನಿ ಸಾವನ್ನಪ್ಪಿದ ನೋವಿನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಹರ್ದೋಯಿನಲ್ಲಿ ನಡೆದಿದೆ.

ಪತಿ ಯೋಗೇಶ್ ಕುಮಾರ್ (36) ಸಾವಿಗೆ ಶರಣಾದ ವ್ಯಕ್ತಿ. ಪತ್ನಿ ಮಣಿಕರ್ಣಿಕಾ ಕುಮಾರಿ (28) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಕೆ ನರ್ಸ್​​ ಆಗಿ ಕೆಲಸ ಮಾಡುತ್ತಿದ್ದರು. ಶಿಕ್ಷಕರಾಗಿದ್ದ ಯೋಗೇಶ್​​, ಕಳೆದ 6 ತಿಂಗಳ ಹಿಂದಷ್ಟೇ ಮಣಿಕರ್ಣಿಕಾರನ್ನು ಮದುವೆಯಾಗಿದ್ದರು.

ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ನಾವು ಒಟ್ಟಿಗೆ ಬದುಕುತ್ತೇವೆ, ಒಟ್ಟಿಗೆ ಸಾಯುತ್ತೇವೆ ಎಂದು ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಡಿದ್ದಾರೆ ಎಂದು ತಿಳಿಸಿದ್ದಾರೆ. ಸುರ್ಸಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಖನೌ-ಹರ್ದೋಯಿ ಹೈವೆಯಲ್ಲಿ ನಡೆದ ರಸ್ತೆ ಅಪಘಾತದ ಯೋಗೇಶ್ ಪತ್ನಿ ಸಾವನ್ನಪ್ಪಿದ್ದರು.

ವಿಷಯ ತಿಳಿದ ಯೋಗೇಶ್ ಪತ್ನಿಯನ್ನು ನೋಡಲು ಘಟನಾ ಸ್ಥಳಕ್ಕೆ ಹೋಗಿದ್ದನು, ನಂತರ ಮನೆಗೆ ಬಂದು ನೇಣು ಬಿಗಿದುಕೊಂಡು ಸಾವಿಗೆ ಶಣಾಗಿದ್ದಾನೆ. ಇವರ ಪತ್ನಿ ಮೃತಪಟ್ಟ ಸುದ್ದಿ ತಿಳಿದು ನೆರಹೊರೆಯವರು ವಿಚಾರಿಸಲು ಮನೆಗೆ ಬಂದಾಗ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು