ಉತ್ತರಾಖಂಡ : ಉತ್ತರಾಖಂಡದಲ್ಲಿ ಸುರಿದ ಭಾರೀ ಮಳೆಗೆ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ರಾಜ್ಯದ ನೆರೆ ಪರಿಸ್ಥಿತಿ ಕುರಿತು ಮಾಹಿತಿ ನೀಡಲಾಗಿದೆ. ಈಗಾಗಲೇ ಹಲವು ಕಡೆಗಳಲ್ಲಿ ಮನೆಗಳು, ಸೇತುವೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮಳೆಯ ಆರ್ಭಟಕ್ಕೆ 16 ಮಂದಿ ಮೃತಪಟ್ಟಿದ್ದಾರೆ.
ನೀರಿನಲ್ಲಿ ಸಿಲುಕಿರುವವರ ರಕ್ಷಣೆಗೆ ಎನ್ ಡಿಆರ್ ಎಫ್, ಪೊಲೀಸರು, ಹಾಗೂ ಮೂರು ಹೆಲಿಕಾಫ್ಟರ್ ಗಳನ್ನು ನಿಯೋಜಿಸಲಾಗಿದೆ ಎಂದರು. ಈಗಾಗಲೇ ರಾಜ್ಯಾದ್ಯಂತ ಸುರಿದ ಮಳೆಗೆ ರಸ್ತೆಗಳು ಮತ್ತು ಕಟ್ಟಡಗಳು ಜಲಾವೃತಗೊಂಡಿವೆ. ಸೇತುವೆಗಳು ಕೊಚ್ಚಿ ಹೋಗಿದ್ದು, ನದಿಗಳು ತುಂಬಿ ಹರಿಯುತ್ತಿರುವುದು ವರದಿಯಾಗಿದೆ.
#WATCH: All gates of Nanak Sagar Dam in Uttarakhand's Udham Singh Nagar opened following a rise in the water level due to heavy rainfall in the state. pic.twitter.com/A7GRZEXJD9
— ANI (@ANI) October 19, 2021