News Karnataka Kannada
Wednesday, May 01 2024
ಉತ್ತರಖಂಡ

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಮುಂದುವರಿಕೆ

Pushkar Singh
Photo Credit :

ಡೆಹ್ರಾಡೂನ್ : ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಮುಂದುವರೆಯಲಿದ್ದಾರೆ. ಉತ್ತರಾಖಂಡ್ ಬಿಜೆಪಿ ವೀಕ್ಷಕರಾದ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಡೆಹ್ರಾಡೂನ್ ಗೆ ನಿನ್ನೆ ಆಗಮಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭ ನಾಳೆ ನಡೆಯುವ ನಿರೀಕ್ಷೆಯಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.

ಹಿಂದಿನ ಇತರ ಸರ್ಕಾರಗಳಂತೆ ಕಣಿವೆ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವಲ್ಲಿ ಸಫಲವಾಗಿದೆ. 70 ಸದಸ್ಯ ಬಲದ ಆಸೆಂಬ್ಲಿಯಲ್ಲಿ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದಾಗ್ಯೂ, ಧಮಿ ತನ್ನ ಕ್ಷೇತ್ರವನ್ನು ಕಳೆದುಕೊಂಡಿದ್ದಾರೆ.

ಧಮಿ ಚುನಾವಣೆಯಲ್ಲಿ ಸೋತರೂ ಮತ್ತೆ ಅವರಲ್ಲಿ ವಿಶ್ವಾಸವಿಡಬೇಕೆ ಎಂಬುದು ಹಲವು ನಾಯಕರ ಪ್ರಶ್ನೆಯಾಗಿತ್ತು. ಅವರಿಗಾಗಿ ಮತ್ತೆ ಚುನಾವಣೆಗಾಗಿ ಹಾಲಿ ಶಾಸಕರೊಬ್ಬರು ತಮ್ಮ ಸ್ಥಾನವನ್ನು ತೆರವು ಮಾಡಬೇಕಾದ ಅಗತ್ಯವಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು