ಉತ್ತರಾಖಂಡ : ಕೇರಳದಲ್ಲಿ ಮಳೆಯಾರ್ಭಟ ಕಡಿಮೆಯಾಗುತ್ತಿದ್ದಂತೆ ಉತ್ತರಾಖಂಡ ನಲ್ಲಿ ವರುಣನ ಅವಕೃಪೆಗೆ ತುತ್ತಾಗಿದ್ದು, ಈಗಾಗಲೇ 20 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಭೀಕರ ಮಳೆಯಿಂದಾಗಿ ಬಹುತೇಕ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಪ್ರಮುಖವಾಗಿ ಅನೇಕ ಮನೆಗಳು ಧರೆಗುರುಳಿದ್ದು, ಅನೇಕರು ಜೀವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.
ಸತತ ಮಳೆಯಿಂದಾಗಿ ಮೇಘ ಸ್ಫೋಟ ಹಾಗೂ ಭೂಕುಸಿತ ಉಂಟಾಗಿದ್ದು, ನೈನಿತಾಲ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿ 10 ಜನರು ಸಾವಿಗೀಡಾಗಿದ್ದಾರೆ. ಅದರಲ್ಲಿ ಐವರು ಕಾರ್ಮಿಕರು ಸೇರಿಕೊಂಡಿದ್ದು, ಇಬ್ಬರು ಬಿಹಾರ ಹಾಗೂ ಮೂವರು ಉತ್ತರ ಪ್ರದೇಶದವರು ಎಂದು ತಿಳಿದು ಬಂದಿದೆ.
ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಬೇರೆ ಬೇರೆ ರಾಜ್ಯಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ನೈನಿತಾಲ್ ಸಂಪರ್ಕ ಕಡಿತಗೊಂಡಿದೆ. ರಾಮಗಢದಲ್ಲಿ ಮನೆ ಕುಸಿದು ಐವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ರಾಜ್ಯದಲ್ಲಿ ಪರಿಸ್ಥಿತಿ ಉಲ್ಭಣಗೊಳ್ಳುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಈಗಾಗಲೇ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಕೂಡ ಪ್ರವಾಹ ಪೀಡಿತ ಸ್ಥಳಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಪ್ರವಾಹದಲ್ಲಿ ಸಿಲುಕಿಕೊಂಡಿರುವ ಜನರ ರಕ್ಷಣೆಗೆ ಹೆಲಿಕಾಪ್ಟರ್ಗಳ ಸಹಾಯ ಪಡೆದುಕೊಳ್ಳಲಾಗಿದ್ದು, ಎರಡು ಹೆಲಿಕಾಪ್ಟರ್ ನೈನಿತಾಲ್ ಹಾಗೂ ಮತ್ತೊಂದು ಗರ್ವಾಲ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. 48 ಗಂಟೆಗಳಿಂದ ವಿದ್ಯುತ್ ಹಾಗೂ ದೂರವಾಣಿ ಸಂಪರ್ಕ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
Uttarakhand CM Pushkar Singh Dhami conducted aerial survey of areas affected due to heavy rainfall. He later reviewed the assessment of losses after reaching Rudraprayag.
Minister Dhan Singh Rawat and state's DGP Ashok Kumar also accompanied him. pic.twitter.com/IAKWGs29Nd
— ANI (@ANI) October 19, 2021