ಡೆಹ್ರಾಡೂನ್, ;ಕುಂಭಮೇಳದಲ್ಲಿ ನಡೆದಿದೆ ಎನ್ನಲಾದ ನಕಲೀ ಕೋವಿಡ್ ಪರೀಕ್ಷಾ ಹಗರಣದಲ್ಲಿ ಶಾಮೀಲಾದ ಆರೋಪದಡಿ ಉತ್ತರಾಖಂಡದ ಇಬ್ಬರು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ.
ಕುಂಭಮೇಳದಲ್ಲಿ ನಡೆದ ಸಂದರ್ಭದಲ್ಲಿ ವೈದಕೀಯ ಮತ್ತು ಆರೋಗ್ಯಾಧಿಕಾರಿ ಡಾ. ಅರ್ಜುನ್ ಸಿಂಗ್ ಸೆಂಗಾರ್ ಹಾಗೂ ಡಾ. ಎನ್.ಕೆ. ತ್ಯಾಗಿ ಅವರನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಆದೇಶ ಹೊರಡಿಸಿದ್ದಾರೆ.
ಹರಿದ್ವಾರದಲ್ಲಿ ನಡೆದ ಕುಂಭಮೇಳದಲ್ಲಿ ನಕಲಿ ಕೋವಿಡ್ ಪರೀಕ್ಷೆ ಹಗರಣ ನಡೆದಿರುವ ಆರೋಪ ಕೇಳಿ ಬಂದಿತು. ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖಾ ಸಮಿತಿಯನ್ನು ರಚಿಸಿದ್ದರು. ಈ ಸಮಿತಿಯ ಶಿಫಾರಸ್ಸುಗಳನ್ನು ಆಧರಿಸಿ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಹಗರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿ ಮತ್ತು ಕೋವಿಡ್ ಸಂದರ್ಭದಲ್ಲೂ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಮಾಡಿತ್ತು. ಈ ನಕಲಿ ಹಗರಣದಲ್ಲಿ ಶಾಮೀಲಾಗಿರುವುದು ಕಂಪನಿ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳುವಂತೆ ನಿದೇರ್ಶನ ನೀಡಲಾಗಿದೆ.
ಕುಂಭಮೇಳದಲ್ಲಿ ನಕಲಿ ಕೋವಿಡ್ ಪರೀಕ್ಷೆ ಇಬ್ಬರು ಅಧಿಕಾರಿ ಸಸ್ಪೆಂಡ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.