ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉತ್ತರಾಖಂಡ ತಲುಪಿದ್ದು, ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ.
ಮೊದಲಿಗೆ ಪುಣ್ಯಕ್ಷೇತ್ರ ಕೇದಾರನಾಥಕ್ಕೆ ಭೇಟಿ ನೀಡಿ, ಶಿವಮಂದಿರಲ್ಲಿ ಪೂಜೆ ಸಲ್ಲಿಸುತ್ತಿದ್ದಾರೆ. ಶಿವನಿಗೆ ಪ್ರಾಥನೆ ಸಲ್ಲಿಸಿದ ಬಳಿಕ ಮೋದಿಯವರು ದೇಗುಲದ ಹಿಂದೆ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಆದಿ ಗುರು ಶಂಕರಾಚಾರ್ಯ ಅವರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ.
ಈ ಪ್ರತಿಮೆಯು 35 ಟನ್ಗಳಷ್ಟು ತೂಕವಿದ್ದು ಮತ್ತು ಇದನ್ನು ಮೈಸೂರು ಮೂಲದ ಶಿಲ್ಪಿಗಳು ಕ್ಲೋರೈಟ್ ಸ್ಕಿಸ್ಟ್ನಿಂದ ತಯಾರಿಸಿದ್ದಾರೆ. ಮಳೆ, ಬಿಸಿಲು ಮತ್ತು ಕಠಿಣ ಹವಾಮಾನವನ್ನು ತಡೆದುಕೊಳ್ಳುತ್ತದೆ ಎಂದು ತಿಳಿದುಬಂದಿದೆ.
ಉತ್ತರಾಖಂಡದಲ್ಲಿ 2013ರಲ್ಲಿ ಉಂಟಾದ ಭಾರೀ ಪ್ರವಾಹದಿಂದ ಆದಿ ಗುರು ಶಂಕರಾಚಾರ್ಯರ ಸಮಾಧಿ ಸಂಪೂರ್ಣ ಹಾನಿಯಾಗಿತ್ತು. ಆ ಸಮಾಧಿಯನ್ನು ಮರು ನಿರ್ಮಾಣ ಮಾಡಲಾಗಿದೆ. ಇಂದು ಮೋದಿಯವರಿಂದ ಅನಾವರಣಗೊಂಡಿದೆ.