ಉತ್ತರಖಂಡ

ಸಂಜೆ ಮದುವೆಯಾಗಿ ಮರುದಿನ ಬೆಳಗ್ಗೆ ಪತ್ನಿಗೆ ವಿಚ್ಛೇದನ

ರುದ್ರಾಪುರ (ಉತ್ತರಾಖಂಡ): ತ್ರಿವಳಿ ತಲಾಖ್​ ನಿಷೇಧ ಕಾನೂನು ಜಾರಿಯಾಗಿ ಎರಡು ವರ್ಷಗಳೇ ಕಳೆದಿವೆ, 2019ರಲ್ಲಿ ಈ ಕಾನೂನು ಜಾರಿಗೆ ಬಂದರೂ ತ್ರಿವಳಿ ತಲಾಖ್‌ ನೀಡುವವರ ಸಂಖ್ಯೆಯೇನೂ ಕಮ್ಮಿಯಾಗಿಲ್ಲ. ಆದರೆ ಇದರ ಅನ್ವಯ ಮೂರು ವರ್ಷಗಳ ಕಠಿಣ ಶಿಕ್ಷೆ ಎಷ್ಟು ಮಂದಿಗೆ ಸಿ‌ಕ್ಕಿದೆ ಎನ್ನುವ ಸರಿಯಾದ ಅಂಕಿ ಅಂಶ ಇಲ್ಲ.

ಈಗ ಅಂಥದ್ದೇ ಒಂದು ಘಟನೆ ಉತ್ತರಾಖಂಡದ ರುದ್ರಾಪುರದಲ್ಲಿ ನಡೆದಿದೆ. ಸಂಜೆ ಮದುವೆಯಾದ ಜಾವೇದ್‌ ಖಾನ್​ ಎಂಬಾತ ವ್ಯಕ್ತಿಯೊಬ್ಬ ಮದುವೆಯಾದ 12 ಗಂಟೆಯಲ್ಲಿಯೇ ಅಂದರೆ ಮರುದಿನ ಬೆಳಗ್ಗೆ ಪತ್ನಿ ನಿಮ್ರಾಳಿಗೆ ತಲಾಖ್‌ ನೀಡಿದ್ದಾನೆ. ಇದಕ್ಕೆ ಕಾರಣ ವರದಕ್ಷಿಣೆ. ತಾನು ಕೇಳಿದಷ್ಟು ವರದಕ್ಷಿಣೆ ನೀಡಲಿಲ್ಲ ಎನ್ನುವ ಕಾರಣಕ್ಕೆ ಪತಿ ಹಾಗೂ ಆತನ ಕುಟುಂಬಸ್ಥರು ಸೇರಿ ಮಹಿಳೆಗೆ ದೌರ್ಜನ್ಯ ಎಸಗಿದ್ದೂ ಅಲ್ಲದೇ ತ್ರಿವಳಿ ತಲಾಖ್‌ ಕೂಡ ನೀಡಿದ್ದಾರೆ.

ಈ ಘಟನೆ ಕಳೆದ ವಾರವೇ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಕೀಚ್‌ ದರವು ನಿವಾಸಿ ನಿಮ್ರಾ ಹಾಗೂ ಬಿಲಾಸ್ಪುರದ ಚಾವೇದ್‌ ಖಾನ್ ಮದುವೆ ನವೆಂಬರ್ 28ರಂದು ನಡೆದಿದೆ. 29ರ ಬೆಳಗ್ಗೆಯಿಂದಲೇ ಜಾವೇದ್‌ ಮತ್ತು ಆತನ ಕುಟುಂಬಸ್ಥರು ಹಿಂಸೆ ನೀಡಲು ಶುರುವಾಡಿದ್ದಾರೆ. ನಿಮ್ರಾಳನ್ನು ನೆಲದ ಮೇಲೆ ಕೂರಿಸಿ ವರದಕ್ಷಿಣೆ ವಿಷಯ ಪ್ರಸ್ತಾಪಿಸಿ ಅವಮಾನಿಸಿದ್ದಾರೆ.

ಆದರೆ ಕೊಡುವುದಷ್ಟೂ ಈಗಾಗಲೇ ಕೊಟ್ಟಾಗಿದೆ. ಮತ್ತೆ ಕೊಡಲು ಸಾಧ್ಯವಿಲ್ಲ ಎಂದಿದ್ದಾರೆ ನಿಮ್ರಾ, ಇದರಿಂದ ಸಿಟ್ಟುಕೊಂಡು ಗಂಡನ ಮನೆಯವರು ಆಕೆಯ ಮೇಲೆ ಹಲ್ಲೆ ಮಾಡಿದ್ದಾರೆ. ಈ ವಿಷಯವನ್ನು ನಿಮ್ರಾ ತನ್ನ ತಂದೆಗೆ ತಿಳಿಸಿದ್ದಾರೆ. ಗಂಡನ ಮನೆಯವರನ್ನು ಸಮಾಧಾನ ಪಡಿಸಲು ನಿಮ್ರಾಳ ಸಹೋದರರು ಗಂಡನ ಮನೆಗೆ ಹೋಗಿದ್ದಾರೆ. ಈ ವೇಳೆ ಅವರ ಎದುರೇ ಗಂಡ ತ್ರಿವಳಿ ತಲಾಖ್‌ ನೀಡಿದ್ದಾನೆ.
ನಿಮ್ರಾ ಇದೀಗ ಪತಿ ಸೇರಿದಂತೆ 8 ಜನರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕಾನೂನಿನ ಅನ್ವಯ ಪತಿ ಹಾಗೂ ಆತನ ಕುಟುಂಬಸ್ಥರಿಗೆ ಯಾವ ರೀತಿಯ ಶಿಕ್ಷೆ ಆಗುತ್ತದೆಯೋ ನೋಡಬೇಕಿದೆ.

Gayathri SG

Recent Posts

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

4 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

12 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

29 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

30 mins ago

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಠಾಣೆಗೆ ಮುತ್ತಿಗೆ ಯತ್ನ, ಪ್ರತಿಭಟನೆ

ನಗರದಲ್ಲಿ ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು…

41 mins ago

ಅಕ್ರಮ ಅಡುಗೆ ಎಣ್ಣೆ ಮಾರಾಟ: ಚಾಲಕ ಪೊಲೀಸರ ವಶಕ್ಕೆ

ಅಕ್ರಮವಾಗಿ ಅಡುಗೆ ಎಣ್ಣೆ ಮಾರಾಟ ಮಾಡಿ ಲಾರಿ ಪಲ್ಟಿಯಾಗಿ ಎಣ್ಣೆ ಕಳುವಾಗಿದೆ ಎಂದು ಮಾಲೀಕರಿಗೆ ಸುಳ್ಳು ಹೇಳಿದ್ದ ಚಾಲಕ ಸಿಕ್ಕಿಬಿದ್ದಿರುವ…

42 mins ago