ಉತ್ತರಾಖಂಡ: ಉತ್ತರಕಾಶಿಯಲ್ಲಿ ಸಂಭವಿಸಿದ ನಿರ್ಮಾಣ ಹಂತದ ಸುರಂಗ ಕುಸಿತದಿಂದ ಹಲವರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸುರಂಗದೊಳಗೆ ಸಿಲುಕಿರುವವರಿಗೆ ಆಹಾರ, ನೀರನ್ನು ಒದಗಿಸಲಾಗಿದೆ, ರಕ್ಷಣಾ ಕಾರ್ಯ ಮುಂದುವರೆದಿದೆ. ಉತ್ತರಕಾಶಿ ಜಿಲ್ಲೆಯ ಬ್ರಹ್ಮಖಾಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗವೊಂದು ನಿನ್ನೆ ಮುಂಜಾನೆ 5 ಗಂಟೆ ಸುಮಾರಿಗೆ ಭಾಗಶಃ ಕುಸಿದಿದ್ದು, 40 ಕಾರ್ಮಿಕರು ಒಳಗೆ ಸಿಲುಕಿಕೊಂಡಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ಪರಿಹಾರ ಪಡೆ (ಎಸ್ಡಿಆರ್ಎಫ್) ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಎಲ್ಲಾ 40 ಕಾರ್ಮಿಕರು ಸುರಕ್ಷಿತವಾಗಿದ್ದು, ಪೈಪ್ ಮೂಲಕ ಆಮ್ಲಜನಕವನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಲ್ಲರೂ ಸುರಕ್ಷಿತವಾಗಿದ್ದಾರೆ, ಸಿಕ್ಕಿಬಿದ್ದಿರುವ ಕಾರ್ಮಿಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.