ಡೆಹ್ರಾಡೂನ್: 130 ಗಂಟೆಗಳಿಗೂ ಹೆಚ್ಚು ಕಾಲ ಸುರಂಗದೊಳಗೆ ಸಿಲುಕಿರುವ 40 ಕಾರ್ಮಿಕರನ್ನು ರಕ್ಷಿಸಲು ಸಮಯದ ಜತೆಗೆ ಸ್ಪರ್ಧೆಗೆ ಬಿದ್ದಿರುವ ರಕ್ಷಣಾ ಕಾರ್ಯಕರ್ತರಿಗೆ ಶುಕ್ರವಾರ ಮತ್ತೊಂದು ಹಿನ್ನಡೆ ಎದುರಾಗಿದೆ. ಹೈ ಪವರ್ ಡ್ರಿಲ್ಲಿಂಗ್ ಮಷಿನ್ ಕೈ ಕೊಟ್ಟಿದೆ. 22 ಮೀಟರ್ ಡ್ರಿಲ್ಲಿಂಗ್ ಮಾಡಿರುವ ಈ ಮಷಿನ್ ಬೇರಿಂಗ್ಗಳು ಜಾಮ್ ಆದ್ದರಿಂದ ಕಲ್ಲಿನ ಮಧ್ಯೆಗಳ ಸಿಲುಕಿಕೊಂಡಿದೆ. ಇದರಿಂದ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರ ರಕ್ಷಣೆ ಭಾರೀ ಅಡ್ಡಿ ಎದುರಾಗಿದೆ.
ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರ ಹಾಗೂ ದಂಡಲ್ಗಾಂವ್ಗೆ ಸಂಪರ್ಕ ಕಲ್ಪಿಸಲು ಚಾರ್ ಧಾಮ್ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. ಸುಮಾರು 4.5 ಕಿಲೋ ಮೀಟರ್ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್ ಉದ್ದದ ಸುರಂಗ ಕುಸಿದಿದೆ.
ನವೆಂಬರ್ 12ರಂದು ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಇಷ್ಟಾದರೂ ಜನರನ್ನು ಹೊರಗೆ ತರಲು ಆಗುತ್ತಿಲ್ಲ. ಹಲವು ಕಾರಣಗಳಿಂದಾಗಿ ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕಾರ್ಮಿಕರ ಕುಟುಂಬಸ್ಥರು ಅಧಿಕಾರಿಗಳು, ಸಿಬ್ಬಂದಿ, ಸರ್ಕಾರದ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದಾರೆ.
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ…
ಇಂದು (ಭಾನುವಾರ) ನಡೆದ ಥಾಯ್ಲೆಂಡ್ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಫೈನಲ್ ಪಂದ್ಯದಲ್ಲಿ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.
ಕೇರಳದ ಪತ್ತನಂತಿಟ್ಟ, ಇಡುಕ್ಕಿ, ಅಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಮೇ 20 ರವರೆಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್…