News Karnataka Kannada
Tuesday, April 30 2024
ಉತ್ತರಖಂಡ

ಕಾಂಗ್ರೆಸ್‌ ಅಳಿವಿನಂಚಿನಲ್ಲಿದೆ: ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

ಡೈನೋಸರ್‌ಗಳಂತೆ ಕಾಂಗ್ರೆಸ್‌ ಪಕ್ಷ ಅಳಿವಿನಂಚಿನತ್ತ ಸಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಗೌಚರ್‌ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಹೇಳಿದರು.
Photo Credit : NewsKarnataka

ಉತ್ತರಾಖಂಡ್:‌ ಡೈನೋಸರ್‌ಗಳಂತೆ ಕಾಂಗ್ರೆಸ್‌ ಪಕ್ಷ ಅಳಿವಿನಂಚಿನತ್ತ ಸಾಗುತ್ತಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಗೌಚರ್‌ನಲ್ಲಿ ರ್ಯಾಲಿಯನ್ನು ಉದ್ದೇಶಿಸಿ ಹೇಳಿದರು.

ʼಕಾಂಗ್ರೆಸ್‌ ನಾಯಕರು ಒಬ್ಬರಾದಮೇಲೆ ಒಬ್ಬರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇನ್ನೂ ಕೆಲ ವರ್ಷಗಳಲ್ಲಿ ಕಾಂಗ್ರೆಸ್‌ ಡೈನೋಸರ್‌ಗಳಂತೆ ಅಳಿದುಹೋಗುವ ಭೀತಿಯಿದೆ. ೨೦೨೪ರ ನಂತರ ಕಾಂಗ್ರೆಸ್‌ ಹೆಸರೆತ್ತಿದರೆ ಅದು ಯಾರು ಎಂದು ಮಕ್ಕಳು ಕೇಳಬಹುದುʼ ಎಂದು ರಾಜನಾಥ್‌ ಸಿಂಗ್‌ ಕಾಂಗ್ರೆಸ್‌ ಕಾಲೆಳೆದಿದ್ದಾರೆ.

ಕಾಂಗ್ರೆಸ್‌ ಒಳಜಗಳವನ್ನು ಉಲ್ಲೇಖಿಸಿದ ಅವರು, ಪ್ರತಿದಿನ ಅವರು ತಮ್ಮಲ್ಲೇ ಜಗಳಾಡಿಕೊಳ್ಲುತ್ತಿದ್ದಾರೆ. ಪಕ್ಷವು ʼಬಿಗ್‌ ಬಾಸ್‌ʼ ಮನೆಯಂತಾಗಿದೆ ಎಂದು ಟೀಕಿಸಿದ್ದಾರೆ.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತವು ಶಕ್ತಿಶಾಲಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಅಂತರ್ರಾಷ್ಟ್ರೀಯ ವೇದಿಕೆಗಳಲ್ಲಿ ದೇಶದ ಧ್ವನಿಗೆ ಮನ್ನಣೆ ಸಿಗುತ್ತಿದ್ದು, ನಮ್ಮ ಮಾತನ್ನು ಗಂಭಿರವಾಗಿ ಪರಿಗಣಿಸಲಾಗುತ್ತಿದೆ ಎಂದು ಸಿಂಗ್‌ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು