News Karnataka Kannada
Monday, April 29 2024
ಉತ್ತರಖಂಡ

ಕೇದಾರನಾಥ ದೇಗುಲದ ಅವರಣದಲ್ಲಿ ಫೋಟೋ, ವಿಡಿಯೋಗೆ ನಿಷೇಧ

kedarnath temple
Photo Credit : Twitter

ಉತ್ತರಖಂಡ: ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯು ಸೋಮವಾರ ಕೇದಾರನಾಥ ದೇವಾಲಯದ ಆವರಣದಲ್ಲಿ ಛಾಯಾಗ್ರಹಣ ಮತ್ತು ವೀಡಿಯೊಗ್ರಫಿಯನ್ನು ಸಂಪೂರ್ಣ ನಿಷೇಧಿಸಿದೆ. ಕೇದಾರನಾಥ ದೇಗುಲದ ಆವರಣದೊಳಗೆ ಹಲವು ಎಚ್ಚರಿಕೆ ಫಲಕಗಳನ್ನು ಹಾಕಿರುವ ದೇವಾಲಯ ಸಮಿತಿ, ಯಾರೇ ಆಗಲಿ ಫೋಟೋ ತೆಗೆಯುವ ಅಥವಾ ವಿಡಿಯೋ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ಅಲ್ಲದೆ, ದೇವಾಲಯದ ಆವರಣದಲ್ಲಿ ವಿವಿಧೆಡೆ ಬೋರ್ಡ್‌ಗಳನ್ನು ಹಾಕಿದ್ದು, ‘ಮೊಬೈಲ್ ಫೋನ್‌ಗಳೊಂದಿಗೆ ದೇವಾಲಯದ ಆವರಣವನ್ನು ಪ್ರವೇಶಿಸಬೇಡಿ; ದೇವಾಲಯದ ಒಳಗೆ ಯಾವುದೇ ರೀತಿಯ ಛಾಯಾಗ್ರಹಣ ಮತ್ತು ವೀಡಿಯೋಗ್ರಫಿಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಮತ್ತು ನೀವು ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿರುತ್ತೀರಿ’’ ಎಂದು ಎಚ್ಚರಿಕೆ ನೀಡಲಾಗಿದೆ.

ದೇವಾಲಯವು ಜನರಿಗೆ ಡೀಸೆಂಟ್‌ ಉಡುಪುಗಳನ್ನು ಧರಿಸಲು ಮತ್ತು ದೇವಾಲಯದ ಆವರಣದಲ್ಲಿ ಡೇರೆಗಳು ಅಥವಾ ಶಿಬಿರಗಳನ್ನು ಸ್ಥಾಪಿಸುವುದನ್ನು ನಿಲ್ಲಿಸುವಂತೆಯೂ ಕೇಳಿಕೊಂಡಿದೆ. ಆದೇಶವನ್ನು ಪಾಲಿಸದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಬರೆದಿರುವ ಬೋರ್ಡ್‌ಗಳಲ್ಲಿ ತಿಳಿಸಲಾಗಿದೆ

ಇನ್ನು, ಈ ಬಗ್ಗೆ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜಯ್‌ ಅಜೇಂದ್ರ ಮಾತನಾಡಿದ್ದು, ಧಾರ್ಮಿಕ ಸ್ಥಳವು ನಂಬಿಕೆಯ ವ್ಯವಸ್ಥೆಯನ್ನು ಅನುಸರಿಸುತ್ತದೆ ಮತ್ತು ಭಕ್ತರು ಅದನ್ನು ಗೌರವಿಸಬೇಕು ಎಂದು ಮನವಿ ಮಾಡಿಕೊಂಡರು. ಹಾಗೆ, ಎಎನ್‌ಐ ಜೊತೆ ಮಾತನಾಡಿದ ಇವರು, ‘ಹಿಂದೆ ಕೆಲವು ಯಾತ್ರಾರ್ಥಿಗಳು ದೇವಸ್ಥಾನದೊಳಗೆ ಅಸಭ್ಯವಾಗಿ ವಿಡಿಯೋ ಮತ್ತು ರೀಲ್ಸ್‌ ಮಾಡುವುದರ ಜೊತೆಗೆ ಫೋಟೋ ಕ್ಲಿಕ್ ಮಾಡುತ್ತಿದ್ದರು. ಇದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು, ಅದಕ್ಕಾಗಿಯೇ ಕೇದಾರನಾಥದಲ್ಲಿ ಎಚ್ಚರಿಕೆ ಫಲಕಗಳನ್ನು ಸಹ ಅಳವಡಿಸಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು