News Karnataka Kannada
Monday, April 29 2024
ಉತ್ತರಖಂಡ

ನಮ್ಮನ್ನು ಜೀವಂತ ಸುಡಲು ಯತ್ನ: ಮಹಿಳಾ ಪೊಲೀಸ್ ಪೇದೆ ನೋವಿನ ಮಾತು

ಹೈಕೋರ್ಟ್ ನಿರ್ದೇಶನದಂತೆ ಅಕ್ರಮ ಮದರಸಾ ತೆರವು ಕಾರ್ಯಾಚರಣೆಯನ್ನು ಉತ್ತರಖಂಡದ ನೈನಿತಾಲ್ ಮುನ್ಸಿಪಲ್ ಕಾರ್ಪೋರೇಶನ್ ಆರಂಭಿಸಿತ್ತು. ಆದರೆ ಈ ಕಾರ್ಯಾಚರಣೆಯಿಂದ ಭುಗಿಲೆದ್ದ ಹಿಂಸಾಚಾರದಲ್ಲಿ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ವಾಹನಗಳು ಬೆಂಕಿಗೆ ಆಹುತಿಯಾಗಿದೆ.
Photo Credit : News Kannada

ಹಲ್ದ್ವಾನಿ: ಹೈಕೋರ್ಟ್ ನಿರ್ದೇಶನದಂತೆ ಅಕ್ರಮ ಮದರಸಾ ತೆರವು ಕಾರ್ಯಾಚರಣೆಯನ್ನು ಉತ್ತರಖಂಡದ ನೈನಿತಾಲ್ ಮುನ್ಸಿಪಲ್ ಕಾರ್ಪೋರೇಶನ್ ಆರಂಭಿಸಿತ್ತು. ಆದರೆ ಈ ಕಾರ್ಯಾಚರಣೆಯಿಂದ ಭುಗಿಲೆದ್ದ ಹಿಂಸಾಚಾರದಲ್ಲಿ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಪೊಲೀಸ್ ವಾಹನಗಳು ಬೆಂಕಿಗೆ ಆಹುತಿಯಾಗಿದೆ. ಪೊಲೀಸ್ ಠಾಣೆ ಪುಡಿ ಪುಡಿಯಾಗಿದೆ. ಈ ಹಿಂಸಾಚಾರದಲ್ಲಿ ಬದುಕುಳಿದ ಮಹಿಳಾ ಪೊಲೀಸ್ ಪೇದೆ ಭೀಕರ ಘಟನೆಯನ್ನು ವಿವರಿಸಿದ್ದಾರೆ. ಪೊಲೀಸರನ್ನು ಜೀವಂತ ಸುಡಲು ಮದರಸಾ ಸಿಬ್ಬಂದಿಗಳು, ಮುಸ್ಲಿಮರು ಪೂರ್ವನಿಯೋಜಿತ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ನಾವು ಬದುಕಿ ಉಳಿದಿದ್ದೇ ಪವಾಡ ಎಂದು ಮಹಿಳಾ ಪೊಲೀಸ್ ಪೇದೆ ಹೇಳಿದ್ದಾರೆ.

ಅಕ್ರಮ ಮದರಸಾ ತೆರವು ಕಾರ್ಯಾಚರಣೆಗೆ ಹಲವು ದಿನಗಳ ಮೊದಲೆ ನೋಟಿಸ್ ನೀಡಲಾಗಿತ್ತು. ಹೀಗಾಗಿ ತೆರವು ಮಾಡಲು ಅಧಿಕಾರಿಗಳು, ಪೊಲೀಸರು ಆಗಮಿಸುತ್ತಾರೆ ಅನ್ನೋ ಮಾಹಿತಿ ಮುಸ್ಲಿಮ್ ಗಲಭೆಕೋರರಿಗೆ ಸ್ಪಷ್ಟವಾಗಿತ್ತು. ಹೀಗಾಗಿ ಕಾರ್ಯಾಚರಣೆಗೆ ಬಂದ ಪೊಲೀಸರು, ಅಧಿಕಾರಿಗಳನ್ನು ಜೀವಂತ ಸುಡಲು ಪೆಟ್ರೋಲ್ ಬಾಂಬ್ ಹಾಗೂ ಕಲ್ಲುಗಳನ್ನು ಶೇಖರಿಸಿಡಲಾಗಿತ್ತು ಎಂದು ಮಹಿಳಾ ಪೊಲೀಸ್ ಪೇದೆ ಹೇಳಿದ್ದಾರೆ.

ಕಾರ್ಯಾಚರಣೆ ನಡೆಯುತ್ತಿರುವಾಗಲೇ ನಮ್ಮ ಮೇಲೆ ಕಲ್ಲುಗಳು ತೂರಿಬಂತು. ಅಧಿಕಾರಿಗಳು, ಪೊಲೀಸರು ಸೇರಿ 50 ಮಂದಿ ಇದ್ದೆವು. ಆದರೆ 250ಕ್ಕೂ ಹೆಚ್ಚ ಮಂದಿ ನಮ್ಮ ಮೇಲೆ ಕಲ್ಲು ತೂರಿದ್ದರು. ಬಳಿಕ ಪೆಟ್ರೋಲ್ ಬಾಂಬ್ ಎಸೆದರು. ಜೀವ ರಕ್ಷಣೆಗೆ ನಾವು ಓಡಿದೆವು. 15 ರಿಂದ 10 ಪೊಲೀಸರು ಒಂದು ಮನೆಯೊಳಗೆ ಸೇರಿದೆವು. ಆದರೆ ಮನೆಯ ಮೇಲೆ ಕಲ್ಲುತೂರಾಟ ಆರಂಭಗೊಂಡಿತು. ಪೆಟ್ರೋಲ್ ಬಾಂಬ್ ಎಸೆದರು. ಬಾಗಿಲಿಗೆ ಪೆಟ್ರೋಲ್ ಸುರಿದು ಜೀವಂತ ಸುಡುವ ಪ್ರಯತ್ನ ಮಾಡಿದರು.

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದೆವು. ಲೋಕೇಶನ್ ಕಳುಹಿಸಿದೆವು. ಹೀಗಾಗಿ ಪೊಲೀಸರು ಆಗಮಿಸಿ ನಮ್ಮನ್ನ ರಕ್ಷಿಸಿದರು. ಈ ವೇಳೆ ಮನೆ ಕಟ್ಟಡದ ಮೇಲಿನಿಂದ ಕಲ್ಲು ತೂರಾಟ ನಡೆಸಿದರು. ಹಲವು ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೆಲವರು ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಮಹಿಳಾ ಪೊಲೀಸ್ ಪೇದೆ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು