ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಜಾರಿ ನಿಟ್ಟಿನಲ್ಲಿ ಉತ್ತರಾಖಂಡ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸಚಿವ ಸಂಪುಟವು ಇಂದು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಮಂಡನೆ ಮಾಡಿದೆ.
ಈ ಏಕರೂಪ ನಾಗರಿಕ ಸಂಹಿತೆಯಲ್ಲಿ ಯಾವುದೇ ಜಾತಿ, ಧರ್ಮ, ಪ್ರಾಂತ್ಯವೆಂಬ ಬೇಧವಿರುವುದಿಲ್ಲ, ದೇಶದ ಸರ್ವರಿಗೂ ಒಂದೇ ಕಾನೂನು ಅನ್ವಯಿಸುತ್ತದೆ. ಇದರ ಅಡಿಯಲ್ಲಿ ವಿವಾಹ, ವಿಚ್ಛೇದನ, ಉತ್ತರಾಧಿಕಾರ, ದತ್ತು ಸ್ವೀಕಾರದ ನಿಯಮಗಳು ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಒಂದೇ ಆಗಿರುತ್ತದೆ.
ಈ ಮಸೂದೆಯಿಂದ ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರೈಸ್ತ ಹೀಗೆ ವಿವಿಧ ಧರ್ಮಗಳಿಗೆ ಆ ಧರ್ಮದ ವೈಯಕ್ತಿಕ ಕಾನೂನುಗಳಿದ್ದು, ಅವೆಲ್ಲವೂ ಏಕರೂಪ ಕಾಯಿದೆ ಅಡಿಯಲ್ಲಿಯೇ ಇನ್ನು ಮುಂದೆ ಬರಲಿವೆ. ಕಳೆದ ಭಾನುವಾರ ಸಿಎಂ ಪುಷ್ಕರ್ ಸಿಂಗ್ ಧಾಮಿ ನೇತೃತ್ವದ ಉತ್ತರಾಖಂಡ ಸಚಿವ ಸಂಪುಟವು ನಡೆಸಿದ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು. ಹಾಗೆಯೇ ಸಚಿವ ಸಂಪುಟ ಮಸೂದೆ ಮಂಡನೆಗೆ ಒಪ್ಪಿಗೆಯನ್ನೂ ನೀಡಿತ್ತು.
ಇದೀಗ ಬಿಜೆಪಿ ಆಡಳಿವಿರುವ ಉತ್ತರಾಖಂಡ ರಾಜ್ಯವು ಏಕರೂಪ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡ ಮೊದಲ ರಾಜ್ಯವಾಗಿದೆ.