News Karnataka Kannada
Sunday, April 28 2024
ಉತ್ತರಖಂಡ

ಶವಾಗಾರದಲ್ಲಿದ್ದ ವ್ಯಕ್ತಿಯ ದೇಹವನ್ನು ತಿಂದ ಇಲಿಗಳು

Rats eat the body of a man kept in the mortuary
Photo Credit : News Kannada

ಉತ್ತರಾಖಂಡ್‌: ಮರಣೋತ್ತರ ಪರೀಕ್ಷೆ ಬಳಿಕ ಶವಾಗಾರದಲ್ಲಿ ಇರಿಸಲಾಗಿದ್ದ ವ್ಯಕ್ತಿಯ ದೇಹವನ್ನು ಇಲಿಗಳು ತಿಂದಿರುವ ಘಟನೆ ಉತ್ತರಾಖಂಡ್‌ನ ಪೌರಿಯಲ್ಲಿ ಆಸ್ಪತ್ರೆಯಲ್ಲಿ ವರದಿಯಾಗಿದೆ.

ವ್ಯಕ್ತಿಯೊಬ್ಬರ ದೇಹವು ಇಲಿಗಳಿಂದ ಭಾಗಶಃ ವಿರೂಪಗೊಂಡ ಸ್ಥಿತಿಯಲ್ಲಿ ಇತ್ತೀಚೆಗೆ ಪತ್ತೆಯಾಗಿದೆ.

ಆಸ್ಪತ್ರೆ ಆಡಳಿತ ನಿರ್ಲಕ್ಷ್ಯ ವಹಿಸದೆ  ಈ ಘಟನೆ ನಡೆದಿದ್ದು, ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಶವವನ್ನು ಇರಿಸಲಾಗಿದ್ದ ಫ್ರೀಜರ್‌ನ ಬೀಗ ಮುರಿದಿತ್ತು ಎಂದು ವ್ಯಕ್ತಿಯ ಸಹೋದರ ನಿತಿನ್ ಉಪ್ರೇತಿ ಹೇಳಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗೆ ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರೂ, ದೇಹವು ಸುರಕ್ಷಿತವಾಗಿರುತ್ತದೆ ಎಂದು ಅವರು ಭರವಸೆ ನೀಡಿದ್ದರು.

ಗ್ರಾಮೀಣಾಭಿವೃದ್ಧಿ ಅಧಿಕಾರಿಯಾಗಿದ್ದ ವ್ಯಕ್ತಿ ಶುಕ್ರವಾರದಂದು ಅಸ್ವಸ್ಥತೆಯಿಂದ ಮೃತಪಟ್ಟಿದ್ದಾರೆ. ಅವರ ಕುಟುಂಬದವರು ಶವಪರೀಕ್ಷೆಗೆ ಮನವಿ ಮಾಡಿದ್ದರು.

ಇಂತಹ ಭೀಕರ ಘಟನೆ ಮರುಕಳಿಸದಂತೆ ತಕ್ಷಣ ಕ್ರಮ ಕೈಗೊಳ್ಳಲಾಗುತ್ತಿದೆ. ಬಾಗಿಲುಗಳನ್ನು ಸರಿಪಡಿಸಲು ಶ್ರೀನಗರದಿಂದ ಬಡಗಿಗಳನ್ನು ಕರೆಸಲಾಗಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು