ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ರವಾನೆ : ಮುಸ್ಲಿಂ ಯುವಕನಿಗೆ ಬಿತ್ತು ಧರ್ಮದೇಟು

ಡೆಹ್ರಾಡೂನ್: 17 ವರ್ಷದ ಅಪ್ರಾಪ್ತೆಗೆ ಮುಸ್ಲಿಂ ಯುವಕನೋರ್ವ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದನ್ನು ರೆಡ್‌ ಹ್ಯಾಂಡ್‌ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ (ಏಪ್ರಿಲ್ 25) ಈ ಘಟನೆ ನಡೆದಿದೆ.

ಘಟನೆಯ ಹಿಂದೆ ಲವ್‌ ಜಿಹಾದ್‌ನ ಶಂಕೆ ವ್ಯಕ್ತವಾಗುತ್ತಿದೆ. ಹಲ್ಲೆಗೊಳಗಾದ ಮುಸ್ಲಿಂ ಯುವ ಲವ್‌ ಜಿಹಾದ್‌ಗೆ ಪ್ರಯತ್ನಿಸುತ್ತಿದ್ದ ಎನ್ನಲಾಗಿದೆ. ಈ ಪ್ರಕರಣವು ಹಲ್ದ್ವಾನಿಯ ಕೊಟ್ವಾಲಿಯಲ್ಲಿ ನಡೆದಿದೆ. ಅಲ್ಲಿ ವಾಸಿಸುವ ಮಹಿಳೆಯೊಬ್ಬರು ಏಪ್ರಿಲ್ 25ರಂದು ಪೊಲೀಸರಿಗೆ ದೂರು ನೀಡಿದ್ದು, ತನ್ನ 17 ವರ್ಷದ ಮಗಳು ಕೆಲವು ದಿನಗಳ ಹಿಂದೆ ಮೊಬೈಲ್ ಫೋನ್ ರೀಚಾರ್ಜ್ ಮಾಡಲು ಅಥರುದ್ದೀನ್‌ನ ‘ದೆಹಲಿ ಮೊಬೈಲ್ ಶಾಪ್’ ತೆರಳಿದ್ದಳು. ಬಳಿಕ ಆತ ಮಗಳ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ ಕಳುಹಿಸಲು ಆರಂಭಿಸಿದ್ದ ಎಂದು ಆರೋಪಿಸಿದ್ದರು. ಜತೆಗೆ ಮೆಸೇಜ್‌ನ ಸ್ಕ್ರೀನ್‌ ಶಾಟ್‌ ಒದಗಿಸಿದ್ದರು.

ಅಪ್ರಾಪ್ತ ಬಾಲಕಿ ಸಂದೇಶಗಳಲ್ಲಿ ಅಥರುದ್ದೀನ್‌ನನ್ನು ಪದೇ ಪದೆ ‘ಸಹೋದರ’ ಎಂದೇ ಕರೆದಿರುವುದು ಕಂಡು ಬಂದಿದೆ. ಆದಾಗ್ಯೂ ಅವನು ಆಕೆ ಸಹೋದರ ಎಂದು ಕರೆಯುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ. ಮಾತ್ರವಲ್ಲ ತನ್ನೊಂದಿಗೆ ಸ್ನೇಹ ಬೆಳೆಸಲು ಒತ್ತಾಯಿಸಿದ್ದ. ತನ್ನ ಕನಸಿನಲ್ಲಿ ನಿನ್ನನ್ನು ನೋಡಿದ್ದೇನೆ ಎಂದೂ ಪೂಸಿ ಹೊಡೆದಿದ್ದ. ತನ್ನನ್ನು ಸಿಖ್ ಎಂದು ಉಲ್ಲೇಖಿಸುವ ಮೂಲಕ ಅಪ್ರಾಪ್ತ ಬಾಲಕಿಯನ್ನು ಮೋಸಗೊಳಿಸಲು ಪ್ರಯತ್ನಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಅನಿಲ್ ಶರ್ಮಾ ಎನ್ನುವವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ 1.39 ನಿಮಿಷಗಳ ಈ ವಿಡಿಯೊ ಹಂಚಿಕೊಂಡಿದ್ದಾರೆ. “ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಘಟನೆ ಇದು. ಹಿಂದೂಗಳು ಮುಸ್ಲಿಮರಿಗೆ ಅಂಗಡಿಗಳನ್ನು ಬಾಡಿಗೆಗೆ ನೀಡುತ್ತಾರೆ. ಬಳಿಕ ಮುಸ್ಲಿಮರು ಲವ್‌ ಜಿಹಾದ್‌ ಆರಂಭಿಸುತ್ತಾರೆ. ಇಲ್ಲೂ ಆಗಿದ್ದು ಅದೇ. ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ಆರೋಪಿ ಅಥರುದ್ದೀನ್‌ ರೀಚಾರ್ಜ್‌ಗಾಗಿ ತನ್ನ ಬಳಿಗೆ ಬರುವ ಹಿಂದು ಹುಡುಗಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ” ಎಂದು ಅವರು ಬರೆದುಕೊಂಡಿದ್ದಾರೆ.

Nisarga K

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago