News Karnataka Kannada
Sunday, May 05 2024
ಉತ್ತರಖಂಡ

ಸುರಂಗದಲ್ಲಿ ಸಿಲುಕಿರುವವರ ರಕ್ಷಗೆ ಇನ್ನೂ 15 ದಿನಗಳು ಬೇಕು ಎಂದ ಅಧಿಕಾರಿಗಳು

Tunl
Photo Credit : News Kannada

ಉತ್ತರಾಖಂಡ: ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗ ಕುಸಿದು 10 ದಿನಗಳು ಕಳೆದಿವೆ. ನಲವತ್ತೊಂದು ಕಾರ್ಮಿಕರನ್ನು ಮುಂದಿನ ಎರಡು ದಿನಗಳಲ್ಲಿ ಡ್ರಿಲ್ಲಿಂಗ್ ಮೆಷಿನ್ ಸಹಾಯದಿಂದ ಹೊರತೆಗೆಯಬಹುದು.

ಆದರೆ ಅದೂ ಕೂಡ ಕೆಲಸ ಮಾಡದಿದ್ದರೆ ಕಾರ್ಮಿಕರ ರಕ್ಷಣೆಗೆ 15ದಿನವರೆಗೂ ಹಿಡಿಯಬಹುದು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ನ.12ರಂದು ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣಹಂತದಲ್ಲಿರುವ ಸುರಂಗದ ಒಂದು ಭಾಗ ಕುಸಿದಿತ್ತು, 41 ಮಂದಿ ಕಾರ್ಮಿಕರು ಇದೀಗ ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ. ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಮೆರಿಕ ನಿರ್ಮಿತ ಆಗರ್ ಡ್ರಿಲ್ಲಿಂಗ್ ಯಂತ್ರವು ಇದೀಗ ಉತ್ತಮ ಆಯ್ಕೆಯಾಗಿದೆ ಮತ್ತು 2.5 ದಿನಗಳಲ್ಲಿ ಕಾರ್ಮಿಕರು ಹೊರಬರಬಹುದು ಎನ್ನಲಾಗ್ತಿದೆ.

ಇನ್ನು 6 ಇಂಚಿನ ಪೈಪ್ ಮೂಲಕ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರಿಗೆ ಚಪಾತಿ, ವೆಜ್​ ಪಲಾವ್, ಮಟರ್​ ಪನೀರ್​ನಂತಹ ಬೇಯಿಸಿದ ಆಹಾರ ಪದಾರ್ಥಗಳನ್ನು ರವಾನಿಸಲಾಗುತ್ತಿದೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು