News Karnataka Kannada
Saturday, May 04 2024
ಉತ್ತರಖಂಡ

ಮೇಘಸ್ಫೋಟಕ್ಕೆ ಉತ್ತರಾಖಂಡ, ಹಿಮಾಚಲ ತತ್ತರ: ಸಾವಿನ ಸಂಖ್ಯೆ 66

Uttarakhand, Himachal Pradesh reeling under cloudburst, death toll rises to 66
Photo Credit : News Kannada

ಉತ್ತರಾಖಂಡ: ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಚಮೋಲಿ ಜಿಲ್ಲೆಯ ಜೋಶಿಮಠದ ಬಳಿಯ ಹೆಲಾಂಗ್‌ನಲ್ಲಿ ಕಟ್ಟಡವೊಂದು ಮಂಗಳವಾರ ತಡ ರಾತ್ರಿ ಕುಸಿದು ಬಿದ್ದ ಪರಿಣಾಮ ಮೂವರನ್ನು ರಕ್ಷಿಸಲಾಗಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ದೌಡಾಯಿಸಿದ್ದು ಕಟ್ಟಡದ ಅಡಿಯಲ್ಲಿ ಸಿಲುಕಿರುವ ಮೂವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಮಾಹಿತಿ ಅಧಿಕಾರಿ ರವೀಂದ್ರ ನೇಗಿ ತಿಳಿಸಿದ್ದಾರೆ. ಕಟ್ಟಡದೊಳಗೆ ಇನ್ನೂ ನಾಲ್ವರು ಸಿಲುಕಿರುವ ಶಂಕೆ ಇದೆ ಎನ್ನಲಾಗಿದ್ದು ಆದರೆ ಅಧಿಕಾರಿಗಳು ಇದನ್ನು ಇನ್ನೂ ಖಚಿತಪಡಿಸಿಲ್ಲ.

ಮಂಗಳವಾರ ತಡರಾತ್ರಿ ಪಿಪಲ್ಕೋಟಿ ಮತ್ತು ಜೋಶಿಮಠ ನಡುವಿನ ಬದರಿನಾಥ ಹೆದ್ದಾರಿಯ ಹೆಲಾಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಹಿತಿ ಪ್ರಕಾರ ಅಲಕನಂದಾ ನದಿ ದಡದಲ್ಲಿರುವ ಕ್ರಷರ್ ಘಟಕದ ಬಳಿ ಎರಡು ಅಂತಸ್ತಿನ ಮನೆ ನಿರ್ಮಿಸಲಾಗಿದೆ. ಇದರಲ್ಲಿ ಕ್ರಷರ್ ನಲ್ಲಿ ಕೆಲಸ ಮಾಡುವ ಕಾರ್ಮಿಕರು ನೆಲೆಸಿದ್ದರು ಎನ್ನಲಾಗಿದೆ ಮಂಗಳವಾರ ರಾತ್ರಿ ಮನೆ ಕುಸಿದು ಬಿದ್ದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು