ಚೆನ್ನೈ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಹೊರಬರಲಿದ್ದು, ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ ಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು.
ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದ್ದು, ನೀಲಿ – ಬಿಳಿ ಬಣ್ಣಕ್ಕೆ ಬದಲಾಗಿ ಕೇಸರಿ – ಬಿಳಿ ಬಣ್ಣವನ್ನು ಬಳಿಯಲಾಗಿದೆ. ಈ ಬಗ್ಗೆ ಅವರು ಅಧಿಕೃತ ಟ್ವಿಟರ್ ನಲ್ಲಿ ಫೋಟೊವನ್ನು ಹಂಚಿಕೊಂಡಿದ್ದಾರೆ. ವಂದೇ ಭಾರತ್ ರೈಲುಗಳಿಗೆ ಭಾರತದ ತ್ರಿವರ್ಣ ಧ್ವಜದಿಂದ ಪ್ರೇರಿತವಾಗಿ ಹೊಸ ಕೇಸರಿ ಬಣ್ಣವನ್ನು ನೀಡಲಾಗಿದೆ. ರಿ ಬಣ್ಣವನ್ನು ನೀಡಲಾಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಮೇಕ್ ಇನ್ ಇಂಡಿಯಾದ ಉತ್ಸಾಹದಲ್ಲಿ ಭಾರತೀಯ ಎಂಜಿನಿಯರ್ಗಳು ಮತ್ತು ತಂತ್ರಜ್ಞರು ರೈಲು ಎಸಿಗಳಿಂದ ಹಿಡಿದು ಶೌಚಾಲಯಗಳಿಗೆ ಬದಲಾವಣೆಗಳನ್ನು ಮಾಡಿದ್ದಾರೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ