News Karnataka Kannada
Wednesday, May 01 2024
ದೇಶ

ಹೊಸ ವಿನ್ಯಾಸದಲ್ಲಿ ಬಿಡುಗಡೆಗೆ ಸಿದ್ಧವಾದ ‘ವಂದೇ ಭಾರತ್’ ರೈಲು

Vande Bharat
Photo Credit : News Kannada

ಚೆನ್ನೈ: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಂದೇ ಭಾರತ್ ರೈಲು ಇದೀಗ ಹೊಸ ವಿನ್ಯಾಸದೊಂದಿಗೆ ಹೊರಬರಲಿದ್ದು, ಇದರ ಹೊಸ ನೋಟವನ್ನು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ವೀಕ್ಷಿಸಿದರು. ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಅಶ್ವಿನಿ ವೈಷ್ಣವ್, ಬಳಿಕ ಚೆನ್ನೈನ ಪೆರಂಬೂರ್ ಲಕ್ಷ್ಮೀಪುರಂ ನಲ್ಲಿರುವ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ ಗೆ ಭೇಟಿ ನೀಡಿ ಹೊಸ ರೈಲನ್ನು ಪರಿಶೀಲಿಸಿದರು.

ಹೊಸ ರೈಲಿನಲ್ಲಿ ತಾಂತ್ರಿಕವಾಗಿ ಮತ್ತು ವಿನ್ಯಾಸದಲ್ಲಿ ಹಲವು ಸುಧಾರಣೆಗಳನ್ನು ಮಾಡಲಾಗಿದ್ದು, ನೀಲಿ – ಬಿಳಿ ಬಣ್ಣಕ್ಕೆ ಬದಲಾಗಿ ಕೇಸರಿ – ಬಿಳಿ ಬಣ್ಣವನ್ನು ಬಳಿಯಲಾಗಿದೆ. ಈ ಬಗ್ಗೆ ಅವರು ಅಧಿಕೃತ ಟ್ವಿಟರ್ ನಲ್ಲಿ ಫೋಟೊವನ್ನು ಹಂಚಿಕೊಂಡಿದ್ದಾರೆ. ವಂದೇ ಭಾರತ್ ರೈಲುಗಳಿಗೆ ಭಾರತದ ತ್ರಿವರ್ಣ ಧ್ವಜದಿಂದ ಪ್ರೇರಿತವಾಗಿ ಹೊಸ ಕೇಸರಿ ಬಣ್ಣವನ್ನು ನೀಡಲಾಗಿದೆ. ರಿ ಬಣ್ಣವನ್ನು ನೀಡಲಾಗಿದೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಮೇಕ್ ಇನ್ ಇಂಡಿಯಾದ ಉತ್ಸಾಹದಲ್ಲಿ ಭಾರತೀಯ ಎಂಜಿನಿಯರ್‌ಗಳು ಮತ್ತು ತಂತ್ರಜ್ಞರು ರೈಲು ಎಸಿಗಳಿಂದ ಹಿಡಿದು ಶೌಚಾಲಯಗಳಿಗೆ ಬದಲಾವಣೆಗಳನ್ನು ಮಾಡಿದ್ದಾರೆ ಎಂದು ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು