Categories: ದೇಶ

ಪ.ಬಂಗಾಳದ ಸಂದೇಶ್ಖಾಲಿಯಲ್ಲಿ ರಿಪಬ್ಲಿಕ್ ಟಿವಿ ಪತ್ರಕರ್ತನ ಬಂಧನ

ಪಶ್ಚಿಮ ಬಂಗಾಳ: ರಿಪಬ್ಲಿಕ್ ಟಿವಿ ಪತ್ರಕರ್ತ ಸಂತು ಪಾನ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸರು ಇಂದು(ಫೆ.19) ಸಂದೇಶ್ಖಾಲಿಯಲ್ಲಿ ಬಂಧಿಸಿದ್ದಾರೆ. ಈ ವಿಚಾರವನ್ನು ಬಂಗಾಳ ಬಿಜೆಪಿ ರಾಜ್ಯ ಅಧ್ಯಕ್ಷ ಡಾ.ಸುಕಾಂತ ಮಜುಂದಾರ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, “ಸ್ಥಳೀಯರು ಎದುರಿಸುತ್ತಿರುವ ದೌರ್ಜನ್ಯಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ಪಶ್ಚಿಮ ಬಂಗಾಳ ಪೊಲೀಸರು ಸಂದೇಶ್ಖಾಲಿಯಿಂದ ವರದಿಗಾರ ಸಂತು ಪಾನ್ ಅವರನ್ನು ಇಂದು ಬಂಧಿಸಿದ್ದಾರೆ.

ಇದು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭದ ಮೇಲಿನ ಬೃಹತ್, ಅಮಾನವೀಯ ಮತ್ತು ನೇರ ದಾಳಿಯಾಗಿದೆ ಎಂದಿದ್ದಾರೆ. ಇನ್ನು ಪಾನ್ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ, “ನನ್ನ ವರದಿಗಾರನಿಗೆ ಸಾರ್ವಜನಿಕ ಸಾರಿಗೆಯಲ್ಲಿ ಹೋಗಲು ಅವಕಾಶ ನೀಡಲಿಲ್ಲ, ಒಂದೇ ಸ್ಥಳದಲ್ಲಿ ಮೂರರಿಂದ ನಾಲ್ಕು ಗಂಟೆಗಳ ಕಾಲ ನಿಲ್ಲುವಂತೆ ಮಾಡಲಾಯಿತು. ನಂತರ ಯಾವುದೇ ನೋಟಿಸ್ ನೀಡದೆ ಅವರನ್ನು ದೈಹಿಕವಾಗಿ ಎಳೆದೊಯ್ದರು. ಕೊಲೆಗಾರನಿಗೂ ತನ್ನ ನಿರಪರಾಧಿತ್ವವನ್ನು ಸಾಬೀತುಪಡಿಸಲು ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ.

ಸಂದೇಶ್ಖಾಲಿ ಪ್ರಕರಣದಲ್ಲಿ ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ರಿಪಬ್ಲಿಕ್ ಬಾಂಗ್ಲಾ ವರದಿಗಾರನನ್ನು ಪೊಲೀಸರು ಕಾನೂನುಬಾಹಿರವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಚಾನೆಲ್ ಹೇಳಿಕೆಯಲ್ಲಿ ತಿಳಿಸಿದೆ.

Ashitha S

Recent Posts

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

26 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

44 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago