ಬಿಹಾರ: ಮದುವೆ ಸಂಭ್ರಮದಲ್ಲಿ ಹೊಡೆದ ಪಟಾಕಿಯಿಂದ ಮನೆಯ ಚಪ್ಪರಕ್ಕೆ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ಕಳೆದ ದಿನ ನಡೆದಿದೆ. ದುರಂತದಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸುನಿಲ್ ಪಾಸ್ವಾನ್ (26), ಲಿಲಾ ದೇವಿ (23), ಕಾಂಚನ್ ದೇವಿ (26), ಸಿದ್ದಾರ್ಥ್ ಕುಮಾರ್ (4), ಶಶಾಂಕ್ ಕುಮಾರ್ (3), ಸಾಕ್ಷಿ ಕುಮಾರಿ (5) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ನರೇಶ್ ಪಾಸ್ವಾನ್ ಎಂಬಾತನ ಮಗಳ ಮದುವೆ ಇತ್ತು. ಹಾಗಾಗಿ ಬೇರೆ ಊರಿನಿಂದ ಮದುವೆಗೆ ಬಂದವರನ್ನು ಸ್ವಾಗತಿಸಲು ಸಿದ್ಧತೆ ನಡೆಸಲಾಗಿತ್ತು. ದಿಬ್ಬಣ ಬಂದ ತಕ್ಷಣ ಪಟಾಕಿ ಸಿಡಿಸಿದ್ದಾರೆ. ಆಗ ಟೆಂಟ್ಗೆ ಬೆಂಕಿ ಹೊತ್ತಿಕೊಂಡಿತ್ತು. ಜನರು ಬಂದು ಬೆಂಕಿ ನಂದಿಸಲು ಶುರುಮಾಡಿದಾಗ ಅಲ್ಲಿದ್ದ ಸಿಲಿಂಡರ್ಗೂ ಬೆಂಕಿ ಹೊತ್ತಿಕೊಂಡಿದೆ.
ಅಲ್ಲಿಂದ ಡೀಸೆಲ್ ಸ್ಟಾಕ್ಗೂ ಬೆಂಕಿ ತಗುಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರೆಲ್ಲಾ ಒಂದೇ ಕುಟುಂಬದವರು ಎನ್ನಲಾಗಿದೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…