News Karnataka Kannada
Sunday, May 05 2024
ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಸಿಬಿಐ ತನಿಖೆ ಆದೇಶ

Calcutta High Court 19082021
Photo Credit :

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅತ್ಯಾಚಾರ, ಹತ್ಯೆಗಳ ಪ್ರಕರಣಗಳ ಸಿಬಿಐ ತನಿಖೆ ನಡೆಸಲು ಕೋಲ್ಕತ್ತ ಹೈಕೋರ್ಟ್ ಆದೇಶ ನೀಡಿದೆ.

ಹಂಗಾಮಿ ಮುಖ್ಯನ್ಯಾಯಮೂರ್ತಿ ರಾಜೇಶ್ ಬಿಂದಾಲ್ ನೇತೃತ್ವದ ಪಂಚ ಸದಸ್ಯಪೀಠ ಸಿಬಿಐ ತನಿಖೆಗೆ ಆದೇಶ ನೀಡಿದ್ದು ಜೊತೆಗೆ ಎಸ್ಐಟಿ ಯನ್ನೂ ರಚಿಸಲು ಸೂಚಿಸಿದೆ.

ಎರಡೂ ತನಿಖೆಗಳನ್ನು ಕೋರ್ಟ್ ಮೇಲ್ವಿಚಾರಣೆ ನಡೆಸುವುದಾಗಿ ನ್ಯಾಯಲಯ ಹೇಳಿದೆ. ಚುನಾವಣೋತ್ತರ ಗಲಭೆಗಳ ತನಿಖೆಗೆ ಸಂಬಂಧಿಸಿದ ವರದಿಯನ್ನು ಇನ್ನು 6 ವಾರಗಳಲ್ಲಿ ಸಲ್ಲಿಸಬೇಕೆಂದು ಕೇಂದ್ರೀಯ ತನಿಖಾ ದಳಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.

ಐಪಿಎಸ್ ಅಧಿಕಾರಿಗಳು, ಟೆಲಿಕಮ್ಯುನಿಕೇಷನ್ಸ್ ವಿಭಾಗದ ಪ್ರಧಾನ ನಿರ್ದೇಶಕ, ಸುಮನ್ ಬಾಲ ಸಾಹೂ, ಕೋಲ್ಕತ್ತಾ ಪೊಲೀಸ್ ಆಯುಕ್ತ ಸೌಮೆನ್ ಮಿತ್ರ ಹಾಗೂ ರಣ್ ವೀರ್ ಕುಮಾರ್ ಅವರನ್ನು ಎಸ್ಐಟಿ ಒಳಗೊಂಡಿರಲಿದೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಗಲಭೆಗಳಿಗೆ ಸಂಬಂಧಿಸಿದಂತೆ ಎನ್ ಹೆಚ್ಆರ್ ಸಿ ವರದಿಯನ್ನು ಗಮನಿಸಿದ್ದ ಕೋಲ್ಕತ್ತಾ ನ್ಯಾಯಾಲಯ ಮೇಲ್ನೋಟಕ್ಕೆ ಮಮತಾ ಸರ್ಕಾರ ತಪ್ಪು ಹೆಜ್ಜೆ ಇಟ್ಟಿರುವುದು ಕಂಡುಬಂದಿದೆ ಎಂದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು