ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅತ್ಯಾಚಾರ, ಹತ್ಯೆಗಳ ಪ್ರಕರಣಗಳ ಸಿಬಿಐ ತನಿಖೆ ನಡೆಸಲು ಕೋಲ್ಕತ್ತ ಹೈಕೋರ್ಟ್ ಆದೇಶ ನೀಡಿದೆ.
ಹಂಗಾಮಿ ಮುಖ್ಯನ್ಯಾಯಮೂರ್ತಿ ರಾಜೇಶ್ ಬಿಂದಾಲ್ ನೇತೃತ್ವದ ಪಂಚ ಸದಸ್ಯಪೀಠ ಸಿಬಿಐ ತನಿಖೆಗೆ ಆದೇಶ ನೀಡಿದ್ದು ಜೊತೆಗೆ ಎಸ್ಐಟಿ ಯನ್ನೂ ರಚಿಸಲು ಸೂಚಿಸಿದೆ.
ಎರಡೂ ತನಿಖೆಗಳನ್ನು ಕೋರ್ಟ್ ಮೇಲ್ವಿಚಾರಣೆ ನಡೆಸುವುದಾಗಿ ನ್ಯಾಯಲಯ ಹೇಳಿದೆ. ಚುನಾವಣೋತ್ತರ ಗಲಭೆಗಳ ತನಿಖೆಗೆ ಸಂಬಂಧಿಸಿದ ವರದಿಯನ್ನು ಇನ್ನು 6 ವಾರಗಳಲ್ಲಿ ಸಲ್ಲಿಸಬೇಕೆಂದು ಕೇಂದ್ರೀಯ ತನಿಖಾ ದಳಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.
ಐಪಿಎಸ್ ಅಧಿಕಾರಿಗಳು, ಟೆಲಿಕಮ್ಯುನಿಕೇಷನ್ಸ್ ವಿಭಾಗದ ಪ್ರಧಾನ ನಿರ್ದೇಶಕ, ಸುಮನ್ ಬಾಲ ಸಾಹೂ, ಕೋಲ್ಕತ್ತಾ ಪೊಲೀಸ್ ಆಯುಕ್ತ ಸೌಮೆನ್ ಮಿತ್ರ ಹಾಗೂ ರಣ್ ವೀರ್ ಕುಮಾರ್ ಅವರನ್ನು ಎಸ್ಐಟಿ ಒಳಗೊಂಡಿರಲಿದೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಗಲಭೆಗಳಿಗೆ ಸಂಬಂಧಿಸಿದಂತೆ ಎನ್ ಹೆಚ್ಆರ್ ಸಿ ವರದಿಯನ್ನು ಗಮನಿಸಿದ್ದ ಕೋಲ್ಕತ್ತಾ ನ್ಯಾಯಾಲಯ ಮೇಲ್ನೋಟಕ್ಕೆ ಮಮತಾ ಸರ್ಕಾರ ತಪ್ಪು ಹೆಜ್ಜೆ ಇಟ್ಟಿರುವುದು ಕಂಡುಬಂದಿದೆ ಎಂದಿತ್ತು.
ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…
ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…
ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ.
ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…
ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…