News Karnataka Kannada
Sunday, April 28 2024
ಪಶ್ಚಿಮ ಬಂಗಾಳ

ಪಶ್ಚಿಮ ಬಂಗಾಳ ಐಒಸಿಎಲ್ ಘಟಕದಲ್ಲಿ ಅಗ್ನಿ ಅವಘಡ:3 ಸಾವು, 30 ಮಂದಿಗೆ ಗಾಯ

Fire Iran 13072021
Photo Credit :

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ಇರುವ ಐಒಸಿಎಲ್ ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಪ್ರಾಣ ಬಿಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಹಲ್ದಿಯಾ ಸಂಸ್ಕರಣಾಗಾರದ ವಿವಿಧ ಪ್ರಮುಖ ಘಟಕಗಳ ಸ್ಥಗಿತಗೊಳಿಸುವುದು ಮತ್ತು ನಿರ್ವಹಣೆಯನ್ನು ಮಾಡುತ್ತಿದ್ದ ಸಂದರ್ಭದಲ್ಲಿ ಅನಾಹುತ ಸಂಭವಿಸಿದೆ. ಮೋಟಾರ್ ಸ್ಪಿರಿಟ್ ಕ್ವಾಲಿಟಿ (MSQ) ಘಟಕದಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಬೆಂಕಿ ಕಾಣಿಸಿಕೊಂಡಿದೆ.

ಈ ಘಟನೆಯಲ್ಲಿ ಗಾಯಗೊಂಡವರನ್ನು ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಲ್ದಿಯಾ ಪುರಸಭೆಯ ಅಧ್ಯಕ್ಷ ಎಸ್‌ಕೆ ಅಜ್ಗರ್ ಅಲಿ ಎಎನ್‌ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಪ್ರಥಮ ಚಿಕಿತ್ಸಾ ಕೇಂದ್ರದಲ್ಲಿ ಗಾಯಗೊಂಡ 47 ಜನರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಅವರನ್ನು ಹಲ್ದಿಯಾ ರಿಫೈನರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರಲ್ಲಿ ಮೂವರು ಸಾವನ್ನಪ್ಪಿದ್ದು, ಇನ್ನೂ ಏಳು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು