ಕೋಲ್ಕತಾ : ಪಶ್ಚಿಮ ಬಂಗಾಳದ ಚುನಾವಣೋತ್ತರ ಹಿಂಸಾಚಾರದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿ ಕೊಲ್ಕತ್ತಾ ಹೈಕೋರ್ಟ್ ನೀಡಿರುವ ತೀರ್ಪನ್ನು ಬಿಜೆಪಿ ಗುರುವಾರ ಶ್ಲಾಘಿಸಿದೆ ಮತ್ತು ಮಹಿಳೆಯರ ವಿರುದ್ಧದ ಅಪರಾಧವೂ ಸಹ ಇದರಲ್ಲಿ ಸೇರಿಸಲಾಗಿದೆ. ಹಾಗೂ ಉಳಿದ ಪ್ರಕರಣಗಳನ್ನು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ನ್ಯಾಯಾಲಯವು ಹಸ್ತಾಂತರಿಸಿದೆ, ಇವೆರಡನ್ನೂ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ನಡೆಸಲಾಗುತ್ತದೆ.
“ಹೈಕೋರ್ಟ್ ತೀರ್ಪು ರಾಜ್ಯದ ಪೊಲೀಸ್ ಮತ್ತು ಆಡಳಿತದ ರಾಜಕೀಯೀಕರಣ, ನಿಷ್ಕ್ರಿಯತೆ ಮತ್ತು ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ತೀರ್ಪು ಬಂಗಾಳದಲ್ಲಿ ತುಳಿತಕ್ಕೊಳಗಾದ ಮತ್ತು ವಂಚಿತರಾಗಿರುವ ಎಲ್ಲಾ ತಾಯಂದಿರು ಮತ್ತು ಸಹೋದರಿಯರ ಗೆಲುವಾಗಿದೆ ಎಂದು ಬಂಗಾಳ ಬಿಜೆಪಿಯ ಅಧಿಕೃತ ಟ್ವೀಟರ್ ಖಾತೆಯಿಂದ ಟ್ವೀಟ್ ಮಾಡಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ನ್ಯಾಯಮೂರ್ತಿಗಳಾದ ಐ ಪಿ ಮುಖರ್ಜಿ, ಹರೀಶ್ ಟಂಡನ್, ಸೌಮೇನ್ ಸೇನ್ ಮತ್ತು ಸುಬ್ರತಾ ತಾಲೂಕ್ದಾರ್ ಅವರನ್ನು ಒಳಗೊಂಡ ಪಂಚ ಪೀಠವು ಮೂರು ಪ್ರತ್ಯೇಕ ಆದರೆ ಸಹಮತದ ತೀರ್ಪು ಪ್ರಕಟಿಸಿದೆ.
ಪಶ್ಚಿಮ ಬಂಗಾಳ ಚುನಾವಣೋತ್ತರ ಹಿಂಸಾಚಾರ ಸಿಬಿಐ ಗೆ ವಹಿಸಿದ ಹೈ ಕೋರ್ಟ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.