ಪಶ್ಚಿಮ ಬಂಗಾಳ : ಪ್ರಿಯತಮೆಗೆ ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಮುರ್ಷಿದಾಬಾದ್ ಜಿಲ್ಲೆಯ ಬರ್ಹಾಂಪೋರ್ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯನ್ನು ಮಾಲ್ಡಾದ ಸುಶಾಂತ ಚೌಧರಿ ಎಂದು ಗುರುತಿಸಲಾಗಿದ್ದು, ಈತ ಸಂತ್ರಸ್ತೆಯೊಂದಿಗೆ ಸಂಬಂಧ ಹೊಂದಿದ್ದ. ಇಬ್ಬರ ನಡುವೆ ಯಾವುದೋ ವಿಚಾರವಾಗಿ ಜಗಳ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಳಿ ಆರೋಪಿ ಯುವತಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿ ಪರಾರಿಯಾಗಿದ್ದನು.
ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಮುರ್ಷಿದಾಬಾದ್ ಪೊಲೀಸರು, ಸೋಮವಾರ ರಾತ್ರಿ ಸಮ್ಸರ್ಗುಂಜ್ನಲ್ಲಿ ಆರೋಪಿಯನ್ನು ಬಂಧಿಸಿದ್ದು, ಹಲ್ಲೆಗೆ ಬಳಸಿದ್ದ ಚಾಕುವನ್ನು ವಶಪಡಿಸಿಕೊಂಡಿದ್ದಾರೆ.