News Karnataka Kannada
Monday, April 29 2024
ಪಶ್ಚಿಮ ಬಂಗಾಳ

ಹಳಿ ತಪ್ಪಿದ ರೈಲು ಬಿಕನೇರ್-ಗುವಾಹಟಿ ಎಕ್ಸ್‌ಪ್ರೆಸ್ , ಮೃತರ ಸಂಖ್ಯೆ 7ಕ್ಕೆ ಏರಿಕೆ

Train Accident
Photo Credit :

ಕೋಲ್ಕತ್ತ: ಪಶ್ಚಿಮ ಬಂಗಾಳದ ಜಲ್‌ಪೈಗುರಿ ಜಿಲ್ಲೆಯ ದೊಮೊಹಾನಿ ಬಳಿ ಬಿಕನೇರ್-ಗುವಾಹಟಿ ನಡುವಣ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಗುರುವಾರ (ಜ.13) ಸಂಜೆ ಸುಮಾರು 5 ಗಂಟೆ ಹೊತ್ತಿನಲ್ಲಿ ನಡೆದ ಅವಘಡದಲ್ಲಿ 45ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಘಟನಾ ಸ್ಥಳದಿಂದ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಆಸ್ಪತ್ರೆಯಲ್ಲಿ ಮೂವರು ಸಾವಿಗೀಡಾದರು.

ಗಾಯಾಳುಗಳ ಪೈಕಿ ಕೆಲವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಏರುವ ಭೀತಿ ಕಾಡುತ್ತಿದೆ.

12ಕ್ಕೂ ಬೋಗಿಗಳು ಉರುಳಿದವು. ಈ ರೈಲಿನಲ್ಲಿ 1,053 ಮಂದಿ ಪ್ರಯಾಣಿಸುತ್ತಿದ್ದರು ಎಂದು ಈಶಾನ್ಯ ಫ್ರಂಟಿಯರ್ ರೈಲ್ವೆ (ಎನ್‌ಎಫ್‌ಆರ್) ವಕ್ತಾರ ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ. ಕತ್ತಲೆ ಹಾಗೂ ದಟ್ಟವಾದ ಮಂಜು ಆವರಿಸಿರುವುದು ರಕ್ಷಣಾ ಕಾರ್ಯಚರಣೆಗೆ ತೊಡಕಾಗಿ ಪರಿಣಮಿಸಿತು. ಬೋಗಿಗಳನ್ನು ಕ್ರೇನ್ ಮೂಲಕ ತೆರವುಗೊಳಿಸಲಾಗಿದೆ ಎಂದು ಹೇಳಿದ್ದಾರೆ.ಘಟನೆ ಹಿಂದಿನ ನಿಖರ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ₹5 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ ₹1 ಲಕ್ಷ ಹಾಗೂ ಸಣ್ಣಪುಟ್ಟ ಗಾಯಗೊಂಡವರಿಗೆ ₹25 ಸಾವಿರ ಪರಿಹಾರ ನೀಡುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಪ್ರಮುಖರು ಸಂತಾಪ ಸೂಚಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು