ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಹೋಳಿ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಪಾರ್ಟಿಯಲ್ಲಿ ಸ್ನೇಹಿತರ ನಡುವೆ ವಾಗ್ವಾದ ನಡೆದು, ಹಾರಿಸಿದ ಗುಂಡೇಟಿಗೆ ಒಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚೌಹಾಣ್ ಮೃತಪಟ್ಟಿರುವ ವ್ಯಕ್ತಿ ನಗರದ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಹೋಳಿ ಸ್ನೇಹಿತರ ಕೂಟ ಪಾರ್ಟಿ ಆಯೋಜಿಸಿತ್ತು.
ಈ ಸಂದರ್ಭದಲ್ಲಿ ಮಹಿಳೆಯ ಮೇಲೆ ಗುಲಾಲ್ (ಬಣ್ಣದ ಪುಡಿ) ಪ್ರಯೋಗಿಸುವ ಬಗ್ಗೆ ಸ್ನೇಹಿತರ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ಮಲಿಕ್ ಎಂಬಾತ ತನ್ನ ಬಳಿಯಿದ್ದ ಬಂದೂಕಿನಿಂದ ಗುಂಡು ಹಾರಿಸಿದ್ದು, ಚೌಹಾಣ್ ಗುಂಡೇಟಿಗೆ ಬಲಿಯಾಗಿದ್ದಾನೆ. ಮತ್ತೊಬ್ಬ ಸ್ನೇಹಿತ ಗಾಯಗೊಂಡಿದ್ದಾರೆ.
ಕೂಡಲೇ ಮೂವರನ್ನೂ ಎಸ್ಎಸ್ಕೆಎಂ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿಯ ವೈದ್ಯರು ಚೌಹಾಣ್ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಇತರ ಇಬ್ಬರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.