ಮಾಲ್ಡಾ: ಮಣಿಪುರದಲ್ಲಿ ಮಹಿಳೆಯರಿಬ್ಬರ ನಗ್ನ ಮೆರವಣಿಗೆ ದೇಶಾದ್ಯಂತ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೇ ಇಂತಹುದೇ ಮತ್ತೊಂದು ಘಟನೆ ಪಶ್ಚಿಮ ಬಂಗಾಳದಲ್ಲಿ ವರದಿಯಾಗಿದೆ. ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ಇಬ್ಬರು ಮಹಿಳೆಯರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮಾಲ್ಡಾದ ಪಕುವಾಹತ್ನಲ್ಲಿ ಸ್ಥಳೀಯರು ಕಳ್ಳತನದ ಶಂಕೆಯ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದಾರೆ. ಮಹಿಳೆಯರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸುತ್ತಿರುವುದನ್ನು ವಿಡಿಯೋದಲ್ಲಿ ಕಂಡು ಬಂದಿದೆ. ಈ ಕುರಿತು ಪಶ್ಚಿಮ ಬಂಗಾಳ ಪೊಲೀಸರಿಗೆ ಯಾವುದೇ ದೂರು ದಾಖಲಾಗಿಲ್ಲ.
ಘಟನೆಯ ವಿಡಿಯೋವನ್ನು ಬಿಜೆಪಿಯ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಮುಖ್ಯಸ್ಥ ಅಮಿತ್ ಮಾಳವೀಯ ಅವರು, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಕಿಡಿಕಾರಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಭೀಕರ ಘಟನೆಗಳು ಮುಂದುವರಿದಿದೆ. ಮಾಲ್ಡಾದ ಬಮಂಗೋಳ ಪೊಲೀಸ್ ಠಾಣೆಯ ಪಕುವಾ ಹ್ಯಾಟ್ ಪ್ರದೇಶದಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಚಿತ್ರಹಿಂಸೆ ಮತ್ತು ನಿರ್ದಯವಾಗಿ ಥಳಿಸಲಾಗಿದೆ. ಸ್ಥಳದಲ್ಲಿ ಪೊಲೀಸರು ಇದ್ದರೂ ಮೂಕ ಪ್ರೇಕ್ಷಕರಾಗಿದ್ದರು.
ಘಟನೆ ಸಂಬಂಧ ಕೇವಲ ಆಕ್ರೋಶದ ಹೊರಹಾಕುವ ಬದಲು ಬಂಗಾಳದ ಗೃಹ ಮಂತ್ರಿಯಾಗಿರುವುದರಿಂದ ಕಠಿಣ ಕ್ರಮ ಕೈಗೊಳ್ಳಬಹುದಿತ್ತು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಆಯಾ ಧರ್ಮಗಳು ಸಾರಿದ ತತ್ವ ಆದರ್ಶಗಳ ಪಾಲನೆ ಬಗೆಗಿನ ಜನರ ಅಸಡ್ಡೆಯೇ ಇಂದಿನ ಮನುಷ್ಯ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಸತ್ಯ,…
ಧ್ರುವ ಸರ್ಜಾ ನಿವಾಸದಲ್ಲಿ ಅಶ್ವಗ್ರೀವ ಶೀರ್ಷಿಕೆ ಅನಾವರಣ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ನಡೆದಿದೆ.
ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮೃತಪಟ್ಟ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ನಡೆದಿದೆ.
ಆಧ್ಯಾತ್ಮಿಕ ವಿಚಾರದಿಂದ ದೂರ ಹೋಗುತ್ತಿರುವ ಯುವಜನರನ್ನು ಧಾರ್ಮಿಕ ವಿಚಾರಗಳತ್ತ ಸೆಳೆಯುವ ನಿಟ್ಟಿನಲ್ಲಿ ಕಲ್ಯಾಣಪುರ ವಲಯದ ಕ್ರೈಸ್ತ ಯುವಸಮುದಾಯಕ್ಕೆ ತೊಟ್ಟಂ ಸಂತ…
ಜಾಗದ ತಕರಾರಿಗೆ ಸಂಬಂಧಿಸಿ ದಂಪತಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ…