ಮತ ಪ್ರಚಾರದ ವೇಳೆ ಮಹಿಳೆಗೆ ಕಿಸ್​ ಕೊಟ್ಟ ಬಿಜೆಪಿ ಅಭ್ಯರ್ಥಿ!

ಪಶ್ಚಿಮ ಬಂಗಾಳ: ಲೋಕಸಭಾ ಚುನಾವಣೆಗಾಗಿ ಭರ್ಜರಿ ಮತ ಪ್ರಚಾರ ನಡೆಯುತ್ತಿದೆ. ಹೀಗೆ ಮತಯಾಚಣೆ ಮಾಡುತ್ತಿದ್ದ ಅಭ್ಯರ್ಥಿಯೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ.

ಮಾಲ್ಡಾ ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ 2ನೇ ಬಾರಿಗೆ ಸ್ಪರ್ಧಿಸುತ್ತಿರುವ ಬಿಜೆಪಿ ಸಂಸದ ಖಗೇನ್ ಮುರ್ಮು ಎಡವಟ್ಟು ಮಾಡಿದ್ದಾರೆ. ಚಂಚಲ್‌ನಲ್ಲಿರುವ ಸಿಹಿಪುರ್ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡ್ತಿದ್ದ ವೇಳೆ ಖಗೇನ್ ಮುರ್ಮು ಮಹಿಳೆಯೊಬ್ಬರ ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ.

ಸದ್ಯ ಈ ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದ್ದು, ಟಿಎಮ್​ಸಿ ನಾಯಕರು ಸೇರಿದಂತೆ ಪ್ರತಿಪಕ್ಷಗಳ ನಾಯಕರು ಖಗೇನ್ ಮುರ್ಮು ನಡೆಯನ್ನ ಖಂಡಿಸಿದ್ದಾರೆ.

ಟಿಎಂಸಿ ಈ ಬಗ್ಗೆ ಖಂಡಿಸಿದ್ದು, ‘ಮಹಿಳಾ ಕುಸ್ತಿಪಟುಗಳಿಗೆ ಲೈಗಿಂಕ ಕಿರುಕುಳ ನೀಡುವ ಸಂಸದರಿಂದ ಹಿಡಿದು ಬಂಗಾಳಿ ಮಹಿಳೆಯರ ಬಗ್ಗೆ ಅಶ್ಲೀಲ ಹಾಡುಗಳನ್ನು ಹಾಡುವ ನಾಯಕವರೆಗೆ ಬಿಜೆಪಿಯಲ್ಲಿ ಮಹಿಳಾ ವಿರೋಧಿ ರಾಜಕಾರಣಿಗಳೇನು ಕೊರತೆಯಿಲ್ಲ. ನಾರಿ ಕಾ ಸಮ್ಮಾನ್​ನಲ್ಲಿ ಮೋದಿ ಕಾ ಪರಿವಾರ್​ ತೊಡಗಿಸಿಕೊಂಡಿರೋದು ಹೀಗೆ’ ಎಂದು ಬರೆದುಕೊಂಡಿದ್ದಾರೆ.

Ashitha S

Recent Posts

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

1 min ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

9 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

13 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

23 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

28 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago