News Karnataka Kannada
Sunday, May 19 2024
ಪಶ್ಚಿಮ ಬಂಗಾಳ

ಕಚ್ಚಾ ಬಾಂಬ್‌ ಸ್ಫೋಟ : ಮಗು ಮೃತ್ಯು, ಇಬ್ಬರು ಗಂಭೀರ

ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪಾಂಡುವಾ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮಗುವೊಂದು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
Photo Credit : NewsKarnataka

ಪಶ್ಚಿಮ ಬಂಗಾಳ: ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಮಕ್ಕಳು ಆಕಸ್ಮಿಕವಾಗಿ ಕಚ್ಚಾ ಬಾಂಬ್‌ ಅನ್ನು ಚೆಂಡು ಎಂದು ಭಾವಿಸಿ ಎತ್ತಿಕೊಂಡಿದ್ದಾರೆ. ಆಗ ಅದು ಸ್ಫೋಟಗೊಂಡ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಪಾಂಡುವಾ ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ ಮಗುವೊಂದು ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಘಟನೆಯಲ್ಲಿ ಪುಟ್ಟ ಕಂದಮ್ಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಗಾಯಗೊಂಡ ಇಬ್ಬರಲ್ಲಿ ಒಬ್ಬ ತನ್ನ ಬಲಗೈಯನ್ನೇ ಕಳೆದುಕೊಂಡಿದ್ದಾನೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೆತ್ತಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಇಂದು ಇದೇ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮ ಕೈಗೊಳ್ಳಬೇಕಿತ್ತು. ಬೃಹತ್‌ ಸಾರ್ವಜನಿಕ ಸಭೆಯನ್ನೂ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಅದಕ್ಕೂ ಮುನ್ನ ಈ ಘಟನೆ ನಡೆದಿರುವುದು ಎಲ್ಲರಲ್ಲೂ ಆತಂಕ ಮೂಡಿಸಿದೆ. ಇನ್ನು ನಾಳೆ ನಡೆಯಲಿರುವ ಮೂರನೇ ಹಂತ ಚುನಾವಣೆಯಲ್ಲಿ ರಾಜ್ಯ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು