ಕೋಲ್ಕತ್ತಾ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಕುರಿತು ಹೇಳಿಕೆ ದೇಶದೆಲ್ಲೆಡೆ ಕೋಲಾಹಲ ಸೃಷ್ಟಿಸಿದೆ. ಬಿಜೆಪಿ ಕೇಂದ್ರ ನಾಯಕರು, ಆರ್ಎಸ್ಎಸ್ ಮುಖಂಡರು, ಹಿಂದು ಸಂಘಟನೆಗಳು ಈ ವಿಚಾರದಲ್ಲಿ ಸ್ಟಾಲಿನ್ ಅವರ ಮೇಲೆ ಮುಗಿಬಿದ್ದಿವೆ.
ಇದೀಗ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಕೂಡ ಸ್ಟಾಲಿನ್ ಅವರ ಸನಾತನ ಧರ್ಮದ ಹೇಳಿಕೆಗಳ ಕುರಿತು ಅಸಮ್ಮತಿ ವ್ಯಕ್ತಪಡಿಸಿದ್ದಾರೆ. “ಒಂದು ವರ್ಗದ ಜನರನ್ನು ನೋಯಿಸುವ ಯಾವುದೇ ವಿಷಯದಲ್ಲಿ ನಾವು ಭಾಗಿಯಾಗಬಾರದು” ಎಂದು ಮಮತಾ ಹೇಳಿದ್ದಾರೆ.
ಉದಯನಿಧಿ ಅವರು ಯಾವ ಸಂದರ್ಭದಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ ಎಂಬ ಮಾಹಿತಿ ಇಲ್ಲ. ಆದರೆ ಪ್ರತಿಯೊಂದು ಧರ್ಮವನ್ನು ನಾವು ಸಮಾನವಾಗಿ ಗೌರವಿಸಬೇಕು ಎಂದು ನಾನು ಭಾವಿಸುತ್ತೇನೆ ಎಂದು ಮಮತಾ ಹೇಳಿದ್ದಾರೆ. ನಾನು ತಮಿಳುನಾಡು ಮತ್ತು ದಕ್ಷಿಣ ಭಾರತದ ಜನರನ್ನು ಗೌರವಿಸುತ್ತೇನೆ. ಪ್ರತಿಯೊಂದು ಧರ್ಮವು ಪ್ರತ್ಯೇಕ ಭಾವನೆಗಳನ್ನು ಹೊಂದಿರುವುದರಿಂದ ಎಲ್ಲರನ್ನೂ ಗೌರವಿಸಬೇಕು”. ನಾನು ಸನಾತನ ಧರ್ಮವನ್ನು ಗೌರವಿಸುತ್ತೇನೆ ಮತ್ತು ನಾವು ವೇದಗಳಿಂದ ಪ್ರೇರಣೆ ಪಡೆದಿದ್ದೇವೆ. ನಮ್ಮಲ್ಲಿ ಹಲವಾರು ಪುರೋಹಿತರಿದ್ದಾರೆ. ನಮ್ಮ ರಾಜ್ಯ ಸರ್ಕಾರವು ಅವರಿಗೆ ಪಿಂಚಣಿ ನೀಡುತ್ತಿದೆ ಎಂದು ಹೇಳಿದ್ದಾರೆ.