ಕೋಲ್ಕತ್ತಾ: ಇಸ್ಕಾನ್ ಗೋವುಗಳನ್ನು ಕಟುಕರಿಗೆ ಮಾರಾಟ ಮಾಡುತ್ತಿದೆ ಎನ್ನುವ ಬಿಜೆಪಿ ಸಂಸದೆ ಮೇನಕಾ ಗಾಂಧಿ ಹೇಳಿಕೆಯ ವಿರುದ್ಧ ಇಸ್ಕಾನ್ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದೆ. ಇಸ್ಕಾನ್ ವಿರುದ್ಧ ಸಂಪೂರ್ಣ ಆಧಾರರಹಿತ ಆರೋಪಗಳನ್ನು ಹೊರಿಸಿದ್ದಕ್ಕಾಗಿ ನಾವು ಮೇನಕಾ ಗಾಂಧಿ ಅವರಿಗೆ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ನೋಟಿಸ್ ಕಳುಹಿಸಿದ್ದೇವೆ.
ಇಸ್ಕಾನ್ ಭಕ್ತರು, ಬೆಂಬಲಿಗರು ಮತ್ತು ಹಿತೈಷಿಗಳಿಗೆ ನಿಂದನೆ ಹಾಗೂ ದುರುದ್ದೇಶಪೂರಿತ ಆರೋಪಗಳಿಂದ ತೀವ್ರ ನೋವುಂಟಾಗಿದೆ. ಕೋಲ್ಕತ್ತಾದ ಉಪಾಧ್ಯಕ್ಷ ರಾಧಾರಮಣ್ ದಾಸ್ ಹೇಳಿದ್ದಾರೆ.
ಜಾಗತಿಕವಾಗಿ ಅತ್ಯಂತ ಪ್ರಭಾವಶಾಲಿ ಕೃಷ್ಣ ಪಂಥವೆಂದು ಗುರುತಿಸಲ್ಪಟ್ಟಿರುವ ಇಸ್ಕಾನ್, ಈ ಆರೋಪಗಳನ್ನು ತಳ್ಳಿಹಾಕಿದೆ ಮತ್ತು ಸುಳ್ಳು ಎಂದು ಹೇಳಿದೆ. ಇತ್ತೀಚಿನ ವೈರಲ್ ವೀಡಿಯೊದಲ್ಲಿ, ಮೇನಕಾ ಗಾಂಧಿ ಆಂಧ್ರಪ್ರದೇಶದ ಇಸ್ಕಾನ್ನ ಅನಂತಪುರ ಗೌಶಾಲಾಗೆ ಭೇಟಿ ನೀಡಿದ ಬಗ್ಗೆ ಮಾತನಾಡಿದ್ದಾರೆ.
ಅಲ್ಲಿ ವಯಸ್ಸಾದ ಹಸುಗಳು, ಹೋರಿಗಳು ಅಥವಾ ಕರುಗಳಾಗಲಿ ಇಲ್ಲ ಅವುಗಳನ್ನು ಇಸ್ಕಾನ್ ಕಟುಕರಿಗೆ ಮಾರಾಟ ಮಾಡಿದೆ ಎಂದು ಹೇಳಿದ್ದಾರೆ. ಇಸ್ಕಾನ್ ಪ್ರತಿಕ್ರಿಯೆ ಮನೇಕಾ ಅವರ ಆರೋಪಗಳಿಗೆ ಇಸ್ಕಾನ್ ಪ್ರತಿಕ್ರಿಯೆ ನೀಡಿದ್ದು, ಅವುಗಳನ್ನು ಆಧಾರ ರಹಿತ ಎಂದು ಬಣ್ಣಿಸಿದೆ.