“ಸಂದೇಶ್​ಖಾಲಿ” ಮಹಿಳೆಯರ ದೌರ್ಜನ್ಯ ಕುರಿತು ನೈಜ ಘಟನೆ ಆಧರಿತ ಚಿತ್ರ

ಪಶ್ಚಿಮ ಬಂಗಾಳದ  :  ಇತ್ತೀಚೆಗೆ ಮೂಡಿ ಬಂದಿರುವ ಸನಿಮಾಗಳು ನೈಜ ಘಟನೆ ಆಧರಿತ ಸಿನಿಮಾಗಳು ಹಾಗೂ ಸಮಾಜಕ್ಕೆ ಜಾಗೃತಿ ಮೂಡಿಸುವ ಚಿತ್ರಗಳು. ಇದೀಗ ಅಂತಹ ಮತ್ತೊಂದು ಸಿನಿಮಾ ನಿಮ್ಮಮುಂದೆ ಬರಲು ಸಿದ್ಧವಾಗುತ್ತಿದೆ. ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯಲ್ಲಿ ಮಹಿಳೆಯರ ವಿರುದ್ಧ ನಡೆದ ದೌರ್ಜನ್ಯ ಪ್ರಕರಣ ಎಲ್ಲಡೆ ಸದ್ದು ಮಾಡಿತ್ತು. ಇದೀಗ ಸಿನಿಮಾ ಮೂಲಕ ಸಂದೇಶ್​ಖಾಲಿಯಲ್ಲಿ ತೃಣಮೂಲ ಕಾಂಗ್ರೆಸ್​ನ ಮುಖಂಡ ಶಹಜಹಾನ್​ ಶೇಖ್​ ನಡೆಸಿದ ಅಕ್ರಮಗಳನ್ನು ಬಯಲಿಗೆ ಎಳೆಯುವ ಪ್ರಯತ್ನಕ್ಕೆ ಸಿನಿಮಾ ತಂಡ ಸಿದ್ದತೆ ನಡೆಸುತ್ತಿದೆ.

ಸಂದೇಶ್​ಖಾಲಿಯಲ್ಲಿ ಮಹಿಳೆಯರ ವಿರುದ್ಧ ನಡೆದ ಲೈಂಗಿಕ ದೌರ್ಜನ್ಯ ಮತ್ತು ಅಲ್ಲದೇ ಭೂಮಿಯನ್ನು ವಶ ಪಡಿಸಿಕೊಂಡಿದ್ದ ಕಾಂಗ್ರೆಸ್​ನ ಮುಖಂಡ ಶಹಜಹಾನ್​ ಶೇಖ್​  ವಿರುದ್ಧ ಎಲ್ಲ ಮಹಿಳೆಯರು ಸಿಡಿದೆದ್ದಿದ್ದಾರೆ. ಹಾಗಾಗಿ ಸಿನಿಮಾ ಮೂಲಕ ಆತನ ಸಂಪೂರ್ಣ ಅಕ್ರಮ ದೌರ್ಜನ್ಯಗಳನ್ನು ಹೊರ ತರುವ ಪ್ರಯತ್ನಮಾಡಲಿದೆ ಚಿತ್ರ ತಂಡ. ಈ ಚಿತ್ರದ ಟೈಟಲ್‌ ಪೋಸ್ಟರ್‌ ರಿಲೀಸ್‌ ಮಾಡಲಾಗಿದ್ದು ಸಿನಿಮಾದ ಶೀರ್ಷಿಕೆ ʻಸಂದೇಶ್​ಖಾಲಿʼ ಇಡಲಾಗಿದೆ.ಇದನ್ನು ವಿಷೇಶವಾಗಿ ಮಹಿಳಾ ದಿನದಂದು ಘೋಷಿಸಲಾಗಿದೆ.

ಇನ್ನೇನು ಆಗಸ್ಟ ನಲ್ಲಿ ಶೂಟಿಂಗ್‌ ಆಗಲಿದ್ದು ಚುನಾವಣೆ ಮೊದಲೇ ಸಿನಿಮಾ ಬಿಡುಗಡೆ ಮಾಡುವ ಭರವಸೆಯಲ್ಲಿದ್ದಾರೆ.‘ಭಯ, ದೌರ್ಜನ್ಯ ಹಾಗೂ ತುಳಿತದ ವಿರುದ್ಧ ನಡೆದ ಯುದ್ಧದ ನೈಜ ಕಥೆ’ ಎಂಬ ಟ್ಯಾಗ್​ಲೈನ್​ ಈ ಸಿನಿಮಾದ ಪೋಸ್ಟರ್​ನಲ್ಲಿದೆ.

‘ಪರಿನ್​ ಮಲ್ಟಿಮೀಡಿಯಾ’ ಬ್ಯಾನರ್​ ಮೂಲಕ ‘ಸಂದೇಶ್​ಖಾಲಿ’ ಮೂಡಿಬರಲಿದ್ದು, ಸುಮೀತ್​ ಚೌಧರಿ ಮತ್ತು ಕೇವಲ್​ ಸೇಟ್​ ಅವರು ಈ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ. ಸೌರಭ್​ ತಿವಾರಿ ಅವರು ‌ಸಿನಿಮಾದ ನಿರ್ದೇಶನದ ಮಾಡಲಿದ್ದಾರೆ ಅಮಿತಾಭ್​ ಸಿಂಗ್​ ಹಾಗೂ ಇಶಾನ್​ ಬಾಜ್​ಪಾಯಿ ಅವರು ಚಿತ್ರಕಥೆ ಬರೆಯಲಿದ್ದಾರೆ.

 

 

Nisarga K

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

2 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

3 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

4 hours ago