News Karnataka Kannada
Thursday, May 02 2024
ಪಶ್ಚಿಮ ಬಂಗಾಳ

ಹಾವನ್ನಾದರೂ ನಂಬಬಹುದು ಆದರೆ ಬಿಜೆಪಿಯನ್ನು ನಂಬಲಾಗದು: ಮಮತಾ ಬ್ಯಾನರ್ಜಿ

ಹಾವನ್ನಾದರೂ ನಂಬಬಹುದು ಆದರೆ ಬಿಜೆಪಿಯ ನಂಬಲಾಗದು, ಬಿಜೆಪಿ ವಿಷಪೂರಿತ ಹಾವಿಗಿಂತ ಕೆಟ್ಟದ್ದು, ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
Photo Credit : NewsKarnataka

ಪಶ್ಚಿಮ ಬಂಗಾಳ:  ಹಾವನ್ನಾದರೂ ನಂಬಬಹುದು ಆದರೆ ಬಿಜೆಪಿಯನ್ನು ನಂಬಲಾಗದು, ಬಿಜೆಪಿ ವಿಷಪೂರಿತ ಹಾವಿಗಿಂತ ಕೆಟ್ಟದ್ದು, ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದ ಕೂಚ್​ ಬಿಹಾರದಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದರು.

ಕಳೆದ 3 ವರ್ಷಗಳಿಂದ ವಸತಿ ಯೋಜನೆಗೆ ಹಣ ನೀಡುತ್ತಿಲ್ಲ, ರಸ್ತೆ ಹಣ ನೀಡುತ್ತಿಲ್ಲ, ಬಂಗಾಳ ಉಳಿದರೆ ದೇಶ ಉಳಿಯುತ್ತದೆ. ಕೇಂದ್ರ ತನಿಖಾ ಸಂಸ್ಥೆಗಳು, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಿಜೆಪಿಯ ಆದೇಶದಂತೆ ಕೆಲಸ ಮಾಡುತ್ತಿವೆ

2024 ರ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ತಮ್ಮ ತಯಾರಿಯಲ್ಲಿ ನಿರತವಾಗಿವೆ. ಬಿಜೆಪಿ ಚುನಾವಣಾ ನೀತಿ ಸಂಹಿತೆ ಪಾಲಿಸುತ್ತಿಲ್ಲ. ಶಿತಾಲ್ಕುಚಿಯಲ್ಲಿ ಗುಂಡಿಕ್ಕಿ ಕೊಂದವರು ಈಗ ಬಿರ್ಭೂಮ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆಗೂ ಮುನ್ನ ಬಿಎಸ್​ಎಫ್​ ಸ್ಥಳೀಯರಿಗೆ ಕಿರುಕುಳ ನೀಡುವ ಘಟನೆಗಳು ಕಂಡು ಬಂದರೆ ಪೊಲೀಸರಿಗೆ ದೂರು ನೀಡಿ ಎಂದು ಹೇಳಿದ್ದಾರೆ.

ಬಿಜೆಪಿ ಒಂದು ರಾಷ್ಟ್ರ, ಒಂದು ಪಕ್ಷ ಸಿದ್ಧಾಂತವನ್ನು ಅನುಸರಿಸುತ್ತಿದೆ, ಕೇಂದ್ರೀಯ ತನಿಖಾ ಸಂಸ್ಥೆಗಳ ಮುಂದೆ ತನ್ನ ಪಕ್ಷ ಟಿಎಂಸಿ ತಲೆ ಬಾಗದು, ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೆ ತರಲು ನಾವು ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು