ಕೋಲ್ಕತ್ತಾ: ತೈಮೂರ್, ಬಾಬರ್ನಂತಹ ರಾಜರು ನಮ್ಮ ದೇಶವನ್ನು ಆಳ್ವಿಕೆ ಮಾಡುತ್ತಿದ್ದ ಕಾಲದಲ್ಲಿ ಭಾರತದಲ್ಲಿ ಹಿಂದೂಗಳೇ ಇರಲಿಲ್ಲ ಎಂದು ಟಿಎಂಸಿಯಹೌರ ಕ್ಷೇತ್ರದ ಅಭ್ಯರ್ಥಿ, ಹಾಲಿ ಸಂಸದ ಪ್ರಸೂನ್ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಚುನಾವಣಾ ಪ್ರಚಾರ ಭಾಷಣದಲ್ಲಿ ಮಾತನಾಡಿದ ಅವರು, ಈ ತಥಾಕಥಿತ ಹಿಂದೂಗಳು ಎಂದರೇ ಯಾರು? ಮುಸ್ಲಿಮರು 800 ವರ್ಷಗಳ ಹಿಂದೆಯೇ ಬಂದಿದ್ದರು. ಆಗ ಭಾರತದಲ್ಲಿ ಹಿಂದೂಗಳೇ ಇರಲಿಲ್ಲ. ಹಿಂದುತ್ವ ಎನ್ನುವುದು 300-400 ವರ್ಷಗಳ ಹಿಂದೆ ಉಗಮವಾಗಿದೆ ಎಂದರು.
ಈ ಹೇಳಿಕೆಗೆ ಬಿಜೆಪಿ ಕಿಡಿಕಾರಿದ್ದು, ಪ್ರಸೂನ್ ಬ್ಯಾನರ್ಜಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಹೇಳಿಕೆ ಭಾರತದ ಇತಿಹಾಸಕ್ಕೆ ಮಾಡಿದ ಅವಮಾನ. ಎರಡು ಕೋಮುಗಳ ಮಧ್ಯೆ ದ್ವೇಷ ಕಿಡಿ ಹಬ್ಬಿಸುವ ಈ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.