ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ವಿವಿಧ ವಿಚಾರಗಳಿಗೆ ಆಗಾಗ್ಗೆ ವಿವಾದಗಳು ಭುಗಿಲೇಳುವುದು ಸಾಮಾನ್ಯ. ಇದೀಗ ಹೊಸ ವಿವಾದವೊಂದು ತೀವ್ರವಾಗುವ ಎಲ್ಲ ಲಕ್ಷಣಗಳು ಗೋಚರಿಸಿದೆ.
ಇನ್ನು ಮೂರು ತಿಂಗಳಲ್ಲಿ ಚುನಾವಣೆ ಇದ್ದು, ರಾಜ್ಯದಲ್ಲಿರುವ ಎಲ್ಲ ಬಾಂಗ್ಲಾದೇಶಿ ವಲಸಿಗರಿಗೆ ಮತದಾರರ ಗುರುತಿನ ಚೀಟಿ ನೀಡಲಾಗುತ್ತದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕಿಯೊಬ್ಬರು ನೀಡಿರುವ ಹೇಳಿಕೆ ಇದೀಗ ವ್ಯಾಪಕ ವಿವಾದಕ್ಕೆ ಗ್ರಾಸವಾಗಿದೆ.
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಾಯಕಿ ರತ್ನಾ ವಿಶ್ವಾಸ್ ಅಕ್ರಮ ಬಾಂಗ್ಲಾದೇಶ ವಲಸಿಗರಿಗೆ ಮತದಾರರ ಗುರುತಿನ ಚೀಟಿ ನೀಡುವ ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ನಾರ್ತ್ 24 ಪರಗಣ ಜಿಲ್ಲೆಯ ಸ್ಥಳೀಯ ನಾಯಕಿಯಾದ ರತ್ನಾ ವಿಶ್ವಾಸ್ ಅವರು ಟಿಎಂಸಿ ಸಂಸದ ಎಂ.ಕೆ ಕಾಕೋಲಿ ಘೋಷ್ ದಸ್ತಿದಾರ್ ಅವರ ಜನ್ಮದಿನದ ಕಾರ್ಯಕ್ರಮದ ವೇಳೆ ಭರವಸೆ ನೀಡಿದ್ದಾರೆ.
“ಮೂರು ತಿಂಗಳಲ್ಲಿ 2024ರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಲಾಗುತ್ತದೆ. ಹಾಗಾಗಿ, ಬಾಂಗ್ಲಾದೇಶದ ನಾಗರಿಕರಿಗೂ ಮತದಾರರ ಗುರುತಿನ ಚೀಟಿ ಸಿಗಲು ಟಿಎಂಸಿ ನೆರವು ನೀಡುತ್ತದೆ” ಎಂದು ರತ್ನಾ ವಿಶ್ವಾಸ್ ಹೇಳಿರುವ ವಿಡಿಯೊ ವೈರಲ್ ಆಗಿದೆ.
এলাকার বাংলাদেশীদের ভোটার তালিকায় যুক্ত করতে বলে বিতর্কে জড়ালেন তৃণমূল কংগ্রেসের বারাসত সাংগঠনিক জেলার চেয়ারপার্সন রত্না বিশ্বাস। #TMC #RatnaBiswas #ElectionCommission #Barasat pic.twitter.com/eOxYSiGHCY
— DD Bangla News (@DDBanglaNews) November 25, 2023