ಕಲ್ಕತ್ತಾ: ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿ ಇರುವ ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಹಾಗೂ ಕಿರಿಯ ಸುಶೀಂದ್ರತೀರ್ಥ ಸ್ವಾಮೀಜಿ ಕಲ್ಕತ್ತಾ ನಗರದ ಇಸ್ಕಾನ್ ಸಂಸ್ಥೆಗೆ ಭೇಟಿ ನೀಡಿದರು.
ಈ ವೇಳೆ ಉಭಯ ಶ್ರೀಪಾದರನ್ನು ಇಸ್ಕಾನ್ ಸಂಸ್ಥೆಯವರು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಸಂಸ್ಥೆಯ ವತಿಯಿಂದ ಉಭಯ ಶ್ರೀಪಾದರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಗೌರವಾರ್ಪಣೆ ಸ್ವೀಕರಿಸಿ ಮಾತನಾಡಿದ ಪುತ್ತಿಗೆ ಶ್ರೀ, ಕೋಟಿಗೀತಾಲೇಖನ ಯಜ್ಞದಲ್ಲಿ ಭಾಗಿಯಾಗುವಂತೆ ಭಕ್ತರಿಗೆ ಕರೆ ನೀಡಿದರು.