ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಹಿಂದುಳಿದ ಜಾತಿಗೆ ಸೇರಿದವರಾಗಲಿದ್ದಾರೆ ಎಂದು ಹೇಳಿದ್ದಾರೆ.
ಇಂದು ನಾನು ತೆಲಂಗಾಣ ಜನತೆಗೆ ಹೇಳಲು ಬಯಸುತ್ತೇನೆ, ಬಿಜೆಪಿ ಸರ್ಕಾರವನ್ನು ರಚಿಸಲು ಆಶೀರ್ವಾದ ಮಾಡಿ. ತೆಲಂಗಾಣಕ್ಕೆ ಬಿಜೆಪಿ ಹಿಂದುಳಿದ ವರ್ಗದ ಮುಖ್ಯಮಂತ್ರಿಯನ್ನು ನೀಡಲಿದೆ ಎಂದು ಸೂರ್ಯಪೇಟ್ನಲ್ಲಿ ನಡೆದ ಜನ ಘರ್ಜನ ಸಭೆಯಲ್ಲಿ ಅಮಿತ್ ಶಾ ಹೇಳಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣೆಗೆ ಸಿದ್ಧವಾಗಿದ್ದು ರಾಜ್ಯದಲ್ಲಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಕಾರ್ಯತಂತ್ರದ ಕೆಲಸ ಮಾಡುತ್ತಿದೆ.