ಇಸ್ಲಾಮಾಬಾದ್ : ಸಾರ್ವತ್ರಿಕ ಚುನಾವಣೆಯ ಭರಾಟೆಯಲ್ಲಿ ಇರುವ ಪಾಕಿಸ್ತಾನದಲ್ಲಿ ಚುನಾವಣಾ ಪ್ರಚಾರ ಕಣ ಹಲವು ಅಚ್ಚರಿ, ವಿವಾದ ಹಾಗೂ ಎಡವಟ್ಟುಗಳಿಗೆ ಕಾರಣವಾಗುತ್ತಿದೆ. ಉಗ್ರರ ದಾಳಿ ಭೀತಿ ನಡುವಲ್ಲೇ ದೇಶಾದ್ಯಂತ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರ ಸಮಾವೇಶಗಳನ್ನು ನಡೆಸುತ್ತಿವೆ. ಈ ಪೈಕಿ ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ ನವಾಜ್ ಷರೀಫ್ ಅವರ ಪಿಎಂಎಲ್ – ಎನ್ ಪಕ್ಷದ ಪ್ರಚಾರ ಸಭೆಯು ವಿಶೇಷ ಕಾರಣಕ್ಕಾಗಿ ಗಮನ ಸೆಳೆದಿದೆ.
ನವಾಜ್ ಷರೀಫ್ ಅವರ ಸಾರಥ್ಯದ ಪಿಎಂಎಲ್ – ಎನ್ ಪಕ್ಷದ ಚಿಹ್ನೆಯಲ್ಲಿ ವನ್ಯ ಜೀವಿಗಳಿವೆ. ಇದೇ ಕಾರಣಕ್ಕಾಗಿ ಪಕ್ಷದ ಕಾರ್ಯಕರ್ತರು ನಿಜವಾದ ಹುಲಿ ಹಾಗೂ ಸಿಂಹವನ್ನು ಕಬ್ಬಿಣದ ಬೋನ್ಗಳಲ್ಲಿ ಇರಿಸಿಕೊಂಡು ವಾಹನಗಳಲ್ಲಿ ಸಾಗಿಸಿಕೊಂಡು ಬಂದಿದ್ದಾರೆ. ಲಾಹೋರ್ ನಗರದ ಗಲ್ಲಿ ಗಲ್ಲಿಗಳಲ್ಲೂ ಈ ಬೋನ್ ಸಹಿತ ಹುಲಿ, ಸಿಂಹಗಳು ಸುತ್ತಾಟ ನಡೆಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ವೈರಲ್ ಆಗಿದೆ.
ಸಾವಿರಾರು ಜನರು ಸೇರಿರುವ ಪ್ರಚಾರ ಸಭೆ, ಸಮಾವೇಶಗಳಿಗೆ ಪಂಜರದಲ್ಲಿ ಕೂಡಿ ಹಾಕಿದ್ದ ಹುಲಿ ಹಾಗೂ ಸಿಂಹವನ್ನು ಕರೆ ತರಲಾಗಿದೆ. ಜನರು ಹುಲಿ ಹಾಗೂ ಸಿಂಹಗಳ ಎದುರು ನಿಂತು ಸೆಲ್ಫಿ ಹಾಗೂ ಫೋಟೋ ತೆಗೆದುಕೊಳ್ಳಲು ಮುಗಿಬೀಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಇತ್ತ ಈ ಬೆಳವಣಿಗೆಯ ಮಾಹಿತಿ ಸಿಕ್ಕ ಕೂಡಲೇ ನವಾಜ್ ಷರೀಫ್ ಸಿಟ್ಟಿಗೆದ್ದಿದ್ದಾರೆ. ನಿಜವಾದ ಸಿಂಹ ಹಾಗೂ ಹುಲಿಗಳನ್ನು ಯಾವುದೇ ಕಾರಣಕ್ಕೂ ಪಿಎಂಎಲ್ – ಎನ್ ಪಕ್ಷದ ಸಮಾವೇಶಗಳಿಗೆ ಕರೆ ತರಬಾರದು, ಕೂಡಲೇ ಹಿಂದುರುಗಿಸಿ ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ನವಾಜ್ ಷರೀಫ್ ಸೂಚನೆ ನೀಡಿರೋದಾಗಿ ಪಿಎಂಎಲ್ – ಎನ್ ಪಕ್ಷದ ನಾಯಕಿ ಮರಿಯಮ್ ಔರಂಗಾಜೇಬ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ಆರೆ.
17ನೇ ಆವೃತ್ತಿಯ ಐಪಿಎಲ್ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…
ರಾಜ್ಯ ಸರ್ಕಾರ ಸಾಲ ಮನ್ನಾ ಮಾಡಿ ರೈತರಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…
ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…
ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…
ಯಮುನೋತ್ರಿ, ಗಂಗೋತ್ರಿ, ಕೇದರ್ನಾಥ್ ಮತ್ತು ಬದರಿನಾಥ್ ಪವಿತ್ರ ಚಾರ್ ಧಾಮ್ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…