News Karnataka Kannada
Tuesday, May 07 2024
ವಿದೇಶ

ಪ್ರಧಾನಿ ಉದ್ಘಾಟಿಸಿದ ವಿಮಾನ ನಿಲ್ಧಾಣ ಟರ್ಮಿನಲ್ ಛಾವಣಿ ಸೀಲಿಂಗ್‌ ಐದೇ ದಿನದಲ್ಲಿ ಕುಸಿತ

Airport
Photo Credit : IANS

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 18ರಂದು ಉದ್ಘಾಟಿಸಿದ್ದ ಪೋರ್ಟ್ ಬ್ಲೇರ್‌ನಲ್ಲಿ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡದ ಛಾವಣಿಯ ಸೀಲಿಂಗ್‌ ಭಾಗಗಳು ಕುಸಿದಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ನೆಟಿಜನ್‌ ಗಳು ಕಾಮಗಾರಿ ಗುಣಮಟ್ಟದ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಅಲ್ಲದೆ ಸೋಶಿಯಾಲ್‌ ಮೀಡಿಯಾದಲ್ಲಿ ಛಾವಣಿ ಕುಸಿದಿರುವ ದೃಶ್ಯಗಳು ಹರಿದಾಡುತ್ತಿವೆ.
ಇಂಟಿಗ್ರೇಟೆಡ್ ಟರ್ಮಿನಲ್ ಉದ್ಘಾಟನಾ ಸಮಾರಂಭದಲ್ಲಿ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳು ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವ, ಜನರಲ್ (ನಿವೃತ್ತ) ವಿಕೆ ಸಿಂಗ್ ಮತ್ತು ಹಲವಾರು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಈ ಬಗ್ಗೆ ಕಾಂಗ್ರೆಸ್‌ ಮುಖಂಡ, ಕೇಂದ್ರ ಮಾಜಿ ಸಚಿವ ಜೈರಾಮ್‌ ರಮೇಶ್‌ ಟ್ವೀಟ್‌ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಕೇವಲ ಪ್ರಚಾರಕ್ಕಾಗಿ, ಪಕ್ಷದ ಸೆನ್ಸೆಕ್ಸ್‌ ಹೆಚ್ಚಿಸುವ ಏಕಮಾತ್ರ ಉದ್ದೇಶದಿಂದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸುತ್ತಾರೆ. ರೈಲುಗಳು, ಸೇತುವೆಗಳು, ಕಟ್ಟಡ, ರಸ್ತೆ, ಕಾಮಗಾರಿಗಳ ಗುಣಮಟ್ಟದ ಬಗ್ಗೆ ಅವರಿಗೆ ಕಿಂಚಿತ್‌ ಕಾಳಜಿ ಇಲ್ಲ. ಕಾಮಗಾರಿ ಪೂರ್ಣವಾಗಿದೆಯೇ ಎಂಬ ಬಗ್ಗೆಯೂ ಗಮನಹರಿಸುವುದಿಲ್ಲ. ಕೇವಲ ಪ್ರಚಾರಕ್ಕಾಗಿ ಇಂತಹ ಕಾರ್ಯ ಮಾಡುತ್ತಿದ್ದಾರೆ. ಎಂದು ಹೇಳಿದ್ದಾರೆ. ಅಲ್ಲದೆ ಕಟ್ಟಡದ ವಿಸ್ತೀರ್ಣದ ಸೀಲಿಂಗ್ ಬೀಳುವ ದೃಶ್ಯಗಳನ್ನು ಹಂಚಿಕೊಂಡಿರುವ ನೆಟಿಜನ್‌ ಗಳು ಕಾಮಗಾರಿ ಗುಣಮಟ್ಟದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ವಿಮಾನ ನಿಲ್ದಾಣ ಟರ್ಮಿನಲ್‌ ಉದ್ಘಾಟನೆಗೆ ಮುನ್ನ ಟ್ವೀಟ್‌ ಮಾಡಿದ್ದ ಪ್ರಧಾನಿ ಮೋದಿ, “ಪೋರ್ಟ್ ಬ್ಲೇರ್‌ನ ವೀರ್ ಸಾವರ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಸುಲಭ ಪ್ರಯಾಣವನ್ನು ಖಚಿತಪಡಿಸುತ್ತದೆ. ಇದು ಪ್ರವಾಸೋದ್ಯಮಕ್ಕೆ ಉತ್ತೇಜನಕಾರಿಯಾಗಿದೆ.
ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವನ್ನು ಶೆಲ್‌ನ ಆಕಾರದಲ್ಲಿ ವಿನ್ಯಾಸಗೊಳಿಸಲಾಗಿದ್ದು, ದ್ವೀಪಗಳ ನೈಸರ್ಗಿಕ ಪರಿಸರವನ್ನು ಸುಂದರವಾಗಿ ಚಿತ್ರಿಸಲಾಗಿದೆ. ನೈಸರ್ಗಿಕ ಬೆಳಕಿನ ಮೂಲ ಹೊಂದಿದೆ ಎಂದು ತಿಳಿಸಿದ್ದರು. ₹ 707.73 ಕೋಟಿ ಅಂದಾಜು ವೆಚ್ಚದಲ್ಲಿ ಯೋಜನೆ ಕಾಮಗಾರಿ ನಡೆದಿದೆ ಎಂದು ತಿಳಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು