ಇಸ್ರೇಲ್ : ಕತಾರ್ ಮಾಲೀಕತ್ವದ ಅಲ್–ಜಜೀರಾ ಸುದ್ದಿವಾಹಿನಿಯ ಸ್ಥಳೀಯ ಕಚೇರಿಗಳನ್ನು ಮುಚ್ಚಲು ಸರ್ಕಾರ ಸರ್ವಾನುಮತದಿಂದ ತೀರ್ಮಾನ ಕೈಗೊಂಡಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭಾನುವಾರ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ ತಾಣದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಯಾವಾಗಿನಿಂದ ಈ ನಿರ್ಧಾರ ಜಾರಿಗೆ ಬರಲಿದೆ. ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಮುಚ್ಚಲಾಗುತ್ತದೆಯೋ ಎನ್ನುವುದರ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭಿಸಿಲ್ಲ.
ಈ ಕ್ರಮದಿಂದಾಗಿ ಅಲ್–ಜಜೀರಾ ಮತ್ತು ಇಸ್ರೇಲ್ ನಡುವಿನ ದೀರ್ಘಕಾಲಿನ ಕಲಹ ಮತ್ತೊಂದು ಹಂತ ತಲುಪಿದೆ. ಅಲ್–ಜಜೀರಾ ಪಕ್ಷಪಾತಿಯಾಗಿ ವರ್ತಿಸುತ್ತಿದೆ ಎಂದು ಇಸ್ರೇಲ್ ಪದೇ ಪದೇ ಆರೋಪಿಸುತ್ತಾ ಬಂದಿತ್ತು.
ಗಾಜಾ ಯುದ್ಧಭೂಮಿಯಲ್ಲಿ ವರದಿ ಮಾಡುತ್ತಿರುವ ಕೆಲವು ವಾಹಿನಿಗಳ ಪೈಕಿ ಅಲ್–ಜಜೀರಾವೂ ಒಂದು. ಗಾಜಾದಲ್ಲಿ ಇಸ್ರೇಲ್ನ ಬಾಂಬ್ ದಾಳಿ, ಜನರಿಂದ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳ ಬಗ್ಗೆ ವಾಹಿನಿ ವರದಿ ಮಾಡಿತ್ತು. ಹೀಗಾಗಿ ಹಮಾಸ್ ಜೊತೆ ವಾಹಿನಿ ಒಪ್ಪಂದ ಮಾಡಿಕೊಂಡಿದೆ ಎಂದು ಇಸ್ರೇಲ್ ದೂರಿತ್ತು. ಅಲ್–ಜಜೀರಾಗೆ ಕತಾರ್ ಸರ್ಕಾರ ಬಂಡವಾಳ ಹೂಡಿದೆ. ಅರೆಬಿಕ್ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸುದ್ದಿ ಪ್ರಸಾರ ಮಾಡುತ್ತಿತ್ತು ಎಂಬ ಮಾಹಿತಿ ತಿಳಿದು ಬಂದಿದೆ.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…