ಒಟ್ಟಾವಾ: ಕೆನಡಾದ ರಾಜತಾಂತ್ರಿಕರ ಮೇಲೆ ಭಾರತ ಸರ್ಕಾರದ ದಬ್ಬಾಳಿಕೆಯು ಎರಡೂ ದೇಶಗಳಲ್ಲಿನ ಲಕ್ಷಾಂತರ ಜನರಿಗೆ ಜೀವನವನ್ನು ಕಷ್ಟಕರವಾಗಿಸಿದೆ ಎಂದು ಪ್ರಧಾನಿ ಜಸ್ಟಿನ್ ಟ್ರುಡೊ ಶುಕ್ರವಾರ ಹೇಳಿದ್ದಾರೆ.
41 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಂಡಿರುವುದಾಗಿ ಕೆನಡಾ ಹೇಳಿದ ಒಂದು ದಿನದ ನಂತರ ಟ್ರೂಡೊ ಈ ಪ್ರತಿಕ್ರಿಯೆ ನೀಡಿದ್ದಾರೆ.
ಕೆನಡಾದಲ್ಲಿ ಜೂನ್ನಲ್ಲಿ ನಡೆದ ಸಿಖ್ ಭಯೋತ್ಪಾದಕನ ಹತ್ಯೆಯಲ್ಲಿ ಭಾರತೀಯ ಏಜೆಂಟರು ಭಾಗಿಯಾಗಿರಬಹುದು ಎಂದು ಟ್ರುಡೊ ಕಳೆದ ತಿಂಗಳು ಹೇಳಿದ ಬಳಿಕ ಕೆನಡಾ – ಭಾರತ ಸಂಬಂಧ ಹಳಸಿದೆ. ಈಗ ನಡೆಯುತ್ತಿರುವ ಬೆಳವಣಿಗೆಗಳಿಂದ ಲಕ್ಷಾಂತರ ಜನರ ಜೀವನ ಕಷ್ಟಕರವಾಗಿದೆ. ಇದಕ್ಕೆ ಭಾರತ ಸರ್ಕಾರವೇ ಕಾರಣ ಎಂದು ಹೇಳಿದ್ದಾರೆ.
ಕೆನಡಾದ ರಾಜತಾಂತ್ರಿಕರ ಉಚ್ಚಾಟನೆಯು ವ್ಯಾಪಾರ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಮತ್ತು ಕೆನಡಾದಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ತೊಂದರೆಗಳನ್ನು ಉಂಟುಮಾಡುತ್ತದೆ ಎಂದು ಟ್ರೂಡೊ ಹೇಳಿದರು.