News Karnataka Kannada
Monday, April 29 2024
ವಿದೇಶ

ಕೆನಡಾದ ನಾಗರಿಕರಿಗೆ ವೀಸಾ ಸೇವೆ ರದ್ದುಗೊಳಿಸಿದ ಭಾರತ

Indian Visa Services In Canada Suspended
Photo Credit : IANS

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಪಿಎಂ ಜಸ್ಟಿನ್ ಟ್ರುಡೊ ಹೇಳಿದ ಬಳಿಕ ಭಾರತ ಕೆನಡಾ ಸಂಬಂಧ ತೀರಾ ಹದಗೆಟ್ಟಿದೆ. ಈ ಮಧ್ಯೆ ಕೆನಡಾದಲ್ಲಿ ಭಾರತೀಯ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಕೆನಡಾದ ನಾಗರಿಕರಿಗೆ ವೀಸಾ ನೀಡುವುದನ್ನು ಭಾರತವು “ಮುಂದಿನ ಸೂಚನೆಯವರೆಗೆ” ಸ್ಥಗಿತಗೊಳಿಸಿದೆ. ಆನ್‌ಲೈನ್ ವೀಸಾ ಅರ್ಜಿ ಕೇಂದ್ರವಾದ BLS ಇಂಟರ್‌ನ್ಯಾಷನಲ್‌ ವೀಸಾ ಸೇವೆಗಳನ್ನು “ಕಾರ್ಯಾಚರಣೆಯ (ಆಪರೇಷನಲ್‌) ಕಾರಣಗಳಿಂದಾಗಿ” ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದೆ.

ಈ ನಡುವೆ ಕೆನಡಾದಲ್ಲಿ ಮತ್ತೊಬ್ಬ ಭಾರತ ವಿರೋಧಿ ಖಲಿಸ್ತಾನಿ ಉಗ್ರನನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ಪಂಜಾಬ್‌ ಮೂಲದ ಗ್ಯಾಂಗ್‌ಸ್ಟರ್‌ ಸುಖ್‌ದೂಲ್‌ ಸಿಂಗ್‌ನನ್ನು ಬುಧವಾರ (ಸೆ.20) ರಾತ್ರಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ದವಿಂದರ್‌ ಬಾಂಬಿಹಾ ಎಂಬ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದ ಸುಖಾ ದುನೆಕೆಯನ್ನು ಮೋಗಾ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂದು ಗುಪ್ತಚರ ಮೂಲಗಳಿಂದ ತಿಳಿದುಬಂದಿದೆ. ಗ್ಯಾಂಗ್‌ವಾರ್‌ನಲ್ಲಿ ಸುಖಾ ದುನೆಕೆಯನ್ನು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಜೂನ್‌ 19ರಂದು ಆಂತರಿಕ ಗ್ಯಾಂಗ್‌ವಾರ್‌ನಲ್ಲಿ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಸರ‍್ರೆಯಲ್ಲಿ ಹತ್ಯೆ ಮಾಡಲಾಗಿತ್ತು. ಇಬ್ಬರ ಹತ್ಯೆಯ ಮಾದರಿಯೂ ಒಂದೇ ಆಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು