ಇಸ್ರೇಲ್: ಇಸ್ರೇಲ್ನ ವೈದ್ಯರ ತಂಡವು, ಅಪಘಾತದಲ್ಲಿ ತುಂಡಾಗಿದ್ದ ಬಾಲಕನ ತಲೆಯನ್ನು ಮರುಜೋಡಿಸುವಲ್ಲಿ ಯಶಸ್ವಿಯಾಗಿದೆ ಎಂದು ಜೆರುಸಲೆಮ್ ಆಸ್ಪತ್ರೆ ಬುಧವಾರ ಪ್ರಕಟಿಸಿದೆ.
ಟೈಮ್ಸ್ ಆಫ್ ಇಸ್ರೇಲ್ ಪ್ರಕಾರ, 12 ವರ್ಷದ ಬಾಲಕ ಸುಲೈಮಾನ್ ಹಸನ್ ಬೈಸಿಕಲ್ನಲ್ಲಿ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ತಲೆ ತುಂಡಾಗಿತ್ತು. ಕಾರು ಅಪಘಾತದ ನಂತರ ಸುಲೈಮಾನ್ ಹಸನ್ನನ್ನು ವೆಸ್ಟ್ ಬ್ಯಾಂಕ್ನಿಂದ ಹದಸ್ಸಾ ವೈದ್ಯಕೀಯ ಕೇಂದ್ರಕ್ಕೆ ವಿಮಾನದ ಮೂಲಕ ಕೊಂಡೊಯ್ಯಲಾಯಿತು. ತಪಾಸಣೆ ವೇಳೆ ಬಾಲಕನ ತಲೆಬುರುಡೆಯ ಹಿಂಭಾಗದ ತಳವನ್ನು ಹಿಡಿದಿರುವ ಅಸ್ಥಿರಜ್ಜುಗಳು ಹೆಚ್ಚು ಹಾನಿಗೊಳಗಾಗಿರುವುದು ತಿಳಿದುಬಂದಿದೆ.
ಟೈಮ್ಸ್ ಆಫ್ ಇಸ್ರೇಲ್ ಜೊತೆ ಮಾತನಾಡಿದ ಚಿಕಿತ್ಸೆಯ ಮೇಲ್ವಿಚಾರಣೆ ನಡೆಸಿದ ಮೂಳೆ ಶಸ್ತ್ರಚಿಕಿತ್ಸಕ ಡಾ.ಒಹಾದ್ ಐನಾವ್, ಬಾಲಕನನ್ನು ಉಳಿಸಲು ಹೆಚ್ಚಿನ ಸಾಮರ್ಥ್ಯ ಹಾಕಿದ್ದು, ನಮ್ಮ ಆಸ್ಪತ್ರೆಯಲ್ಲಿನ ಆಧುನಿಕ ತಂತ್ರಜ್ಞಾನದ ಮೂಲಕ ಯಶಸ್ವಿಯಾಗಿ ತಲೆಯನ್ನು ಮರು ಜೋಡಿಸಲಾಗಿದೆ. ಈ ಶಸ್ತ್ರಚಿಕಿತ್ಸೆ ಹಲವು ಗಂಟೆಗಳನ್ನು ತೆಗೆದುಕೊಂಡಿದೆ ಎಂದರು.
ಈ ಶಸ್ತ್ರಚಿಕಿತ್ಸೆಯು ಕಳೆದ ತಿಂಗಳು ನಡೆದಿದೆ. ಆದರೆ ಜುಲೈವರೆಗೆ ವೈದ್ಯರು ಫಲಿತಾಂಶಗಳನ್ನು ಬಹಿರಂಗಪಡಿಸಲಿಲ್ಲ. ಆದರೆ ಇತ್ತೀಚೆಗೆ ಹಸನ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ತಿಳಿಸಿದೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.
ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಆಪ್ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…
ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ…
ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ತೆಲುಗು ಧಾರಾವಾಹಿ ನಟ…
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…