ವಾಷಿಂಗ್ಟನ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದೆ ಅದೇರೀತಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ವಾಷಿಂಗ್ಟನ್ ನಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಅವರು ಮಾತನಾಡಿದರು. ಚೀನಾ ಭಾರತದ ಒಂದೇ ಒಂದು ಇಂಚು ಭೂಮಿ ಕಸಿದುಕೊಂಡಿಲ್ಲ ಎಂದು ಕೇಂದ್ರ ಸರ್ಕಾರ ಕ್ಲೀನ್ ಚಿಟ್ ನೀಡಿರುವ ಕುರಿತು ಅಂತಹ ಹೇಳಿಕೆಯನ್ನು ಯಾರು ನಂಬುವುದಿಲ್ಲ ಎಂದು ಹೇಳಿದ್ದಾರೆ. ಅದೇ ರೀತಿ ಮುಂದಿನ ವರ್ಷದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸದಿದ್ದರೆ ಸಮ್ಮಿಶ್ರ ಸರ್ಕಾರ ರಚಿಸಲು ಪಕ್ಷ ಸಿದ್ಧವಿದೆಯೇ ಎಂಬ ಪ್ರಶ್ನೆಗೆ ಇದು ಕಾಂಗ್ರೆಸ್ ಅಧ್ಯಕ್ಷರಿಗೆ ಕೇಳಬೇಕಾದ ಪ್ರಶ್ನೆ ಎಂದು ಹೇಳಿದ್ದಾರೆ.
ಆದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ದೇಶದೆಲ್ಲೆಡೆ ಕಾಂಗ್ರೆಸ್ ಪರವಾದ ಸುಪ್ತವಾದ ಅಲೆಯಿದೆ ಎಂದು ಹೇಳಿದರು.
ನರೇಂದ್ರ ಮೋದಿಯವರು ಚುನಾವಣೆಯಲ್ಲಿ ಗೆಲ್ಲುತ್ತಾರೆ ಎಂಬ ಈ ಕಲ್ಪನೆಯ ಬಗ್ಗೆ ನನಗೆ ನಂಬಿಕೆಯಿಲ್ಲ. ಗೆಲವು ಹಲವು ವ್ಯಾಖ್ಯಾನಿಸುವಂತೆ ಅಷ್ಟು ಸುಲಭವೂ ಅಲ್ಲ ಎಂದರು. ಚೀನಾ ನಮ್ಮ1,500 ಚದರ ಕಿ.ಮೀ ಪ್ರದೇಶವನ್ನು ಆಕ್ರಮಿಸಿಕೊಂಡಿರುವುದು ಸತ್ಯ ಎಂದರು.